ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು.
Cross references
ಕರ್ತನು ನಿಮ ಗೋಸ್ಕರ ಯುದ್ಧಮಾಡುವನು; ಆದರೆ ನೀವು ಸಮಾಧಾನವಾಗಿರ್ರಿ ಅಂದನು.
ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು.
ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
ಹೀಗೆ ಕರ್ತನು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದನು. ಇದಲ್ಲದೆ ಆ ಯುದ್ಧವು ಬೇತಾವೆನಿನ ವರೆಗೂ ನಡೆಯಿತು.
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು.
ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ.
ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವನ್ನು, ಕಲಿಸಿದ ನನ್ನ ಬಲವಾಗಿರುವ ಕರ್ತನಿಗೆ ಸ್ತೋತ್ರವಾಗಲಿ.
ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.