ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
Cross references
ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ ಅದರ ಫಲ ವನ್ನು ನೀವು ಸುನ್ನತಿಯಿಲ್ಲದ್ದೆಂದು ಲೆಕ್ಕಿಸಬೇಕು; ಮೂರು ವರುಷಗಳ ವರೆಗೆ ಅದು ನಿಮಗೆ ಸುನ್ನತಿಯಿಲ್ಲದ್ದಾಗಿ ರುವದು; ಅದನ್ನು ತಿನ್ನಬಾರದು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.