ಸಂಜೆ ಆಗುತ್ತಿರುವಾಗ ಅವನು ನೀರಿನಲ್ಲಿ ತೊಳ ಕೊಳ್ಳಲಿ; ಸೂರ್ಯನು ಮುಣುಗಿದಾಗ ಪಾಳೆಯದ ಒಳಗೆ ತಿರಿಗಿ ಬರಲಿ.
Cross references
ಯಾವನಾದರೂ ಅವುಗಳ ಶವವನ್ನು ಹೊತ್ತರೆ ತನ್ನ ಬಟ್ಟೆಗಳನ್ನು ಒಗೆಸಿಕೊಂಡು ಸಾಯಂಕಾಲದ ವರೆಗೂ ಅಶುದ್ಧನಾಗಿರುವನು.
ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
ಅವನ ಹಾಸಿಗೆಯನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದು ಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಸ್ರಾವವುಳ್ಳ ವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ ಯಾರನ್ನಾದರೂ ಮುಟ್ಟಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು; ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ಸ್ರಾವವುಳ್ಳವನು ತನ್ನ ಸ್ರಾವದಿಂದ ಶುದ್ಧನಾದರೆ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕಮಾಡಿ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ತನ್ನ ಶರೀರವನ್ನು ತೊಳೆದುಕೊಳ್ಳಬೇಕು; ಆಗ ಅವನು ಶುದ್ಧನಾಗಿರುವನು.
ಒಬ್ಬನಿಗೆ ವೀರ್ಯವು ಹೊರಟುಹೋದರೆ ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು ಸಾಯಂಕಾ ಲದ ವರೆಗೆ ಅಶುದ್ಧನಾಗಿರಬೇಕು.
ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮ ನೀರಿನಿಂದ ತೊಳೆಯಲ್ಪಟ್ಟು ಸಾಯಂಕಾಲದ ವರೆಗೆ ಅಶುದ್ಧವಾಗಿರಬೇಕು.
ಅಂಥದ್ದನ್ನು ಮುಟ್ಟಿದ ಮನುಷ್ಯನು ಸಾಯಂಕಾಲದ ವರೆಗೆ ಅಶುದ್ಧನಾಗಿರಬೇಕು; ಅವನು ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಳ್ಳದ ಹೊರತು ಪರಿಶುದ್ಧ ವಾದವುಗಳನ್ನು ತಿನ್ನಬಾರದು.
ನನ್ನ ಅಕ್ರಮದಿಂದ ನನ್ನನ್ನು ಪೂರ್ಣವಾಗಿ ತೊಳೆ; ನನ್ನ ಪಾಪದಿಂದ ನನ್ನನ್ನು ಶುದ್ಧಿಮಾಡು.
ಹಿಸ್ಸೋಪ್ನಿಂದ ನನ್ನನ್ನು ತೊಳೆ; ಆಗ ನಾನು ಶುಚಿಯಾಗುವೆನು. ನನ್ನನ್ನು ತೊಳೆ, ಆಗ ಹಿಮಕ್ಕಿಂತ ಬಿಳುಪಾಗುವೆನು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.
ನಾನು ಮಾನ ಸಾಂತರದ ನಿಮಿತ್ತ ನಿಮಗೆ ನೀರಿನಲ್ಲಿ ಬಾಪ್ತಿಸ್ಮ ಮಾಡಿಸುವದು ನಿಜವೇ; ಆದರೆ ನನ್ನ ಹಿಂದೆ ಬರುವಾತನು ನನಗಿಂತಲೂ ಶಕ್ತನಾಗಿದ್ದಾನೆ. ಆತನ ಕೆರಗಳನ್ನು ಹೊರುವದಕ್ಕೂ ನಾನು ಯೋಗ್ಯನಲ್ಲ; ಆತನು ಪವಿತ್ರಾ ತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ಬಾಪ್ತಿಸ್ಮ ಮಾಡಿ ಸುವನು.
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.
ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ
ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.
ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು