Home Bibles ದ್ವಿತೀಯೋಪದೇಶಕಾಂಡ 24:15 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 24:15 · ಕನ್ನಡ ಬೈಬಲ್

ದಿನದಿನಕ್ಕೆ ಅವನ ಕೂಲಿ ಕೊಡಬೇಕು; ಸೂರ್ಯನು ಮುಣುಗುವದಕ್ಕಿಂತ ಮುಂಚೆ ಅದನ್ನು ಕೊಡಬೇಕು. ಅವನು ಬಡವನಾಗಿದ್ದು ಅದರ ಮೇಲೆಯೇ ತನ್ನ ಮನಸ್ಸು ಇಟ್ಟಿದ್ದಾನೆ; ಕೊಡದಿದ್ದರೆ ಅವನು ನಿನಗೆ ವಿರೋಧವಾಗಿ ಕರ್ತನ ಕಡೆಗೆ ಕೂಗುವನು; ಆಗ ನಿನ್ನ ಮೇಲೆ ಪಾಪವಿರುವದು.

Cross references

ನಿರ್ಗಮಕಾಂಡ 22:23

ಯಾವದೆ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ನನಗೆ ಮೊರೆಯಿಟ್ಟರೆ ನಾನು ನಿಶ್ಚಯವಾಗಿ ಅವರ ಮೊರೆಯನ್ನು ಕೇಳುವೆನು.

ಲೇವ್ಯಕಾಂಡ 19:13

ನಿನ್ನ ನೆರೆಯವನನ್ನು ವಂಚಿಸಬಾರದು ಅವನನ್ನು ಸುಲುಕೊಳ್ಳಬಾರದು. ಕೂಲಿಯವನ ಕೂಲಿಯು ನಿನ್ನ ಬಳಿಯಲ್ಲಿ ಮುಂಜಾನೆಯ ವರೆಗೆ ಇರಬಾರದು.

ದ್ವಿತೀಯೋಪದೇಶಕಾಂಡ 15:9

ಬಿಡುಗಡೆಯ ವರುಷ ವಾದ ಏಳನೇ ವರುಷವು ಸವಿಾಪವಾಯಿತೆಂಬ ದುಷ್ಟಾಲೋಚನೆ ನಿನ್ನ ಹೃದಯದಲ್ಲಿ ಹುಟ್ಟಿ ನಿನ್ನ ಬಡ ಸಹೋದರನ ಮೇಲೆ ನಿನ್ನ ಕಣ್ಣು ಕೆಟ್ಟದ್ದಾಗಿ ನೀನು ಅವನಿಗೆ ಏನೂ ಕೊಡದೆ ಇರುವದರಿಂದ ಅವನು ನಿನಗೆ ವಿರೋಧವಾಗಿ ಕರ್ತನಿಗೆ ಕೂಗುವಾಗ ನಿನ್ನಲ್ಲಿ ಪಾಪ ಉಂಟಾಗದ ಹಾಗೆ ನೋಡಿಕೋ.

ಯೋಬ 7:2

ಸೇವಕನು ನೆರಳನ್ನು ಅಪೇಕ್ಷಿಸುವ ಪ್ರಕಾರವೂ ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾ ರವೂ

ಯೋಬ 31:38

ನನ್ನ ಭೂಮಿಯು ನನಗೆ ವಿರೋಧವಾಗಿ ಕೂಗಿದರೆ, ಅದರ ಸಾಲುಗಳು ಕೂಡ ದೂರಿದರೆ,

ಯೋಬ 34:28

ಹೀಗೆ ಬಡವರ ಕೂಗು ಆತನ ಬಳಿಗೆ ಬರುವಂತೆ ಮಾಡು ತ್ತಾರೆ, ಮತ್ತು ಆತನು ಬಾಧಿಸಲ್ಪಡುವವರ ಕೂಗನ್ನು ಕೇಳುತ್ತಾನೆ.

ಯೋಬ 35:9

ಬಹು ಬಲಾತ್ಕಾರದ ದೆಸೆಯಿಂದ ಬಲಾತ್ಕಾರ ಮಾಡಲ್ಪಟ್ಟವರು ಕೂಗುವಂತೆ ಅವರು ಮಾಡುತ್ತಾರೆ; ಪರಾಕ್ರಮಿಗಳ ತೋಳಿಗೋಸ್ಕರ ಮೊರೆಯಿಡುತ್ತಾರೆ.

ಕೀರ್ತನೆಗಳು 24:4

ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.

ಕೀರ್ತನೆಗಳು 25:1

ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಕೀರ್ತನೆಗಳು 86:4

ಓ ಕರ್ತನೇ, ನಿನ್ನ ಸೇವಕನ ಪ್ರಾಣವನ್ನು ಸಂತೋಷಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.

ಸಾಮೇತಿಗಳು 3:27

ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.

ಸಾಮೇತಿಗಳು 22:22

ಅವನು ಬಡವನೆಂದು ಬಡವನನ್ನು ಸೂರೆಮಾಡ ಬೇಡ; ಮಾತ್ರವಲ್ಲದೆ ದ್ವಾರದಲ್ಲಿ ದರಿದ್ರರನ್ನು ಹಿಂಸಿಸ ಬೇಡ.

ಸಾಮೇತಿಗಳು 23:10

ಪೂರ್ವಕಾ ಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲ ಗಳಲ್ಲಿ ಪ್ರವೇಶಿಸದಿರು;

ಯೆಶಾಯ 5:7

ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.

ಯೆರೆಮಿಯ 22:13

ಸಮಾರ್ಯದ ಪ್ರವಾದಿಗಳಲ್ಲಿ ಬುದ್ಧಿಹೀನತೆಯನ್ನು ನೋಡಿದ್ದೇನೆ; ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ ನನ್ನ ಜನರಾದ ಇಸ್ರಾಯೇ ಲನ್ನು ತಪ್ಪುವಂತೆ ಮಾಡಿದ್ದಾರೆ.

ಮಲಾಕಿ 3:5

ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 20:8

ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು.

ಮಾರ್ಕ 10:19

ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.

ಯಾಕೋಬ 5:4

ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.

Interlinear

Choose Theme