ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;
Cross references
ತರುವಾಯ ಕರ್ತನು ಮೋಶೆ ಆರೋನರೊಡನೆ ಮಾತನಾಡಿ ಹೇಳಿದ್ದೇನಂದರೆ
ಒಬ್ಬ ಮನುಷ್ಯನಿಗೆ ತನ್ನ ಶರೀರದ ಚರ್ಮದ ಮೇಲೆ ಬಾವಾಗಲಿ ಕಜ್ಜಿಯಾಗಲಿ ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಶರೀರದ ಚರ್ಮದಲ್ಲಿ ಕುಷ್ಠದ ವ್ಯಾಧಿ ಯಂತಿದ್ದರೆ ಅವನು ಯಾಜಕನಾದ ಆರೋನನ ಬಳಿ ಗಾದರೂ ಇಲ್ಲವೆ ಯಾಜಕರಾದ ಅವನ ಕುಮಾರರಲ್ಲಿ ಒಬ್ಬನ ಬಳಿಗಾದರೂ ತರಲ್ಪಡಬೇಕು.
ಆಗ ಯಾಜಕನು ಅದನ್ನು ಗಮನಿಸಬೇಕು; ಇಗೋ, ಕುಷ್ಠವು ಅವನ ಮೈಯೆಲ್ಲವನ್ನು ಹರಡಿಕೊಂಡು ಶುದ್ಧನಾಗಿ ರುವನೆಂದು ಯಾಜಕನು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವದರಿಂದ ಅವನು ಶುದ್ಧನಾಗಿರು ವನೆಂದು
ಅದು ಬಟ್ಟೆಯಲ್ಲಾಗಲಿ ಹಾಸಿ ನಲ್ಲಾಗಲಿ ಹೊಕ್ಕಿನಲ್ಲಾಗಲಿ ಇಲ್ಲವೆ ಚರ್ಮದ ಯಾವದರಲ್ಲಿಯಾಗಲಿ ಇನ್ನೂ ಕಂಡುಬಂದರೆ ಅದು ಹರಡುವ ವ್ಯಾಧಿ ಮತ್ತು ವ್ಯಾಧಿಯುಳ್ಳದ್ದನ್ನು ನೀನು ಬೆಂಕಿಯಿಂದ ಸುಡಬೇಕು.
ಕುಷ್ಠ ರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ: ಅವನು ಯಾಜಕನ ಬಳಿಗೆ ತರಲ್ಪಡಬೇಕು.
ಆದರೆ ಏಳೆನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ ಗಡ್ಡವನ್ನೂ ಕಣ್ಣು ಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಕ್ಷೌರಮಾಡಿಸಿಕೊಳ್ಳಬೇಕು; ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು; ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.
ಯಾಜಕನು ಅಪರಾಧ ಬಲಿ ಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಅದನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೆ ಹಚ್ಚಬೇಕು.
ಅದು ಯಾವಾಗ ಅಶುದ್ಧವಾಗಿರುತ್ತದೋಯಾವಾಗ ಶುದ್ಧವಾಗಿರುತ್ತದೋ ಎಂದು ಅದನ್ನು ಬೋಧಿಸುವ ಹಾಗೆ ಕುಷ್ಠರೋಗದ ವಿಷಯದಲ್ಲಿರುವ ನಿಯಮವು ಇದೇ.
ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು.ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
ಆತನು ಅವರನ್ನು ನೋಡಿ ಅವರಿಗೆ--ಹೋಗಿ ಯಾಜಕರಿಗೆ ನಿಮ್ಮನ್ನು ತೋರಿಸಿ ಕೊಳ್ಳಿರಿ ಅಂದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.