ಆಗ ನಾವು ನಮ್ಮ ಪಿತೃಗಳ ದೇವರಾದ ಕರ್ತನಿಗೆ ಮೊರೆ ಯಿಡಲಾಗಿ ಆತನು ನಮ್ಮ ಸ್ವರವನ್ನು ಕೇಳಿ ನಮ್ಮ ಸಂಕಟವನ್ನೂ ಕಷ್ಟವನ್ನೂ ಬಾಧೆಯನ್ನೂ ನೋಡಿದನು.
Cross references
ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು.
ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ.
ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.
ನಾಳೆ ಇಷ್ಟು ಹೊತ್ತಿಗೆ ಬೆನ್ಯಾ ವಿಾನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು; ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸ ಬೇಕು; ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು; ನನ್ನ ಜನರ ಕೂಗು ನನ್ನ ಬಳಿಗೆ ಬಂದದರಿಂದ ಅವರನ್ನು ನೋಡಿದ್ದೇನೆ ಎಂಬದು.
ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
ಜನಾಂಗಗಳೂ ರಾಜ್ಯಗಳೂ ಕರ್ತ ನನ್ನು ಸೇವಿಸುವದಕ್ಕೆ ಒಟ್ಟಾಗಿ ಕೂಡಿ ಬರುವಾಗ
ಓ ನನ್ನ ಮನವೇ, ಕರ್ತನನ್ನೂ ನನ್ನ ಎಲ್ಲಾ ಅಂತರಂಗವೇ, ಆತನ ಪರಿಶುದ್ಧವಾದ ಹೆಸರನ್ನೂ ಸ್ತುತಿಸು.
ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
ನೀನು ನನ್ನ ಕಡೆಗೆ ದೃಷ್ಟಿಸಿ ನಿನ್ನ ಹೆಸರನ್ನು ಪ್ರೀತಿಸುವವರಿಗೆ ಮಾಡುವ ಪ್ರಕಾರ ನನ್ನನ್ನು ಕರುಣಿಸು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕ ದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸುತ್ತೇನೆ; ಅವನು ಅದನ್ನು ಬೆಂಕಿಯಿಂದ ಸುಡು ವನು.
ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.