ನೀವು ಯೊರ್ದನನ್ನು ದಾಟಿದ ಮೇಲೆ ಜನ ರನ್ನು ಆಶೀರ್ವದಿಸುವದಕ್ಕೆ ಗೆರಿಜ್ಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರಾರಂದರೆ -- ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ್, ಬೆನ್ಯಾವಿಾನ್.
Cross references
ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ಆಗ ಲೇಯಳು--ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟದ್ದರಿಂದ ದೇವರು ನನಗೆ ಕೂಲಿಯನ್ನು ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಇಸ್ಸಾಕಾರ ಎಂದು ಹೆಸರಿಟ್ಟಳು.
ಆಕೆಯು--ಕರ್ತನು ನನಗೆ ಮತ್ತೊಬ್ಬ ಮಗನನ್ನು ಕೂಡಿಸುವನೆಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.
(ಆದರೆ ಆಕೆಯು ಸತ್ತುಹೋದಳು). ಅವಳು ಪ್ರಾಣಬಿಡುವಾಗ ಅವನಿಗೆ ಬೆನೋನಿ ಎಂದು ಹೆಸರಿಟ್ಟಳು; ಆದರೆ ಅವನ ತಂದೆಯು ಅವನಿಗೆ ಬೆನ್ಯಾವಿಾನ್ ಎಂದು ಹೆಸರಿಟ್ಟನು.
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
ಇಸ್ರಾಯೇಲ್ಯರೆಲ್ಲರೂ ಅವರ ಹಿರಿ ಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಪರ ದೇಶಸ್ಥರೂ ದೇಶಸ್ಥರೂ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜ್ಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಕಡೆಗೂ ಜನರನ್ನು ಆಶೀರ್ವದಿಸುವದಕ್ಕೆ ಕರ್ತನ ಸೇವಕನಾದ ಮೋಶೆ ಮೊದಲು ಆಜ್ಞಾಪಿಸಿದ ಹಾಗೆ ನಿಂತರು.
ಯೋತಾಮನಿಗೆ ಇದನ್ನು ತಿಳಿಸಿದಾಗ ಅವನು ಹೋಗಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು ಗಟ್ಟಿಯಾಗಿ ಕೂಗಿ ಅವರಿಗೆ--ಶೆಕೆಮಿನ ಜನರೇ, ದೇವರು ನಿಮ್ಮ ಮೊರೆ ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.