ನೀವು ಯೊರ್ದನನ್ನು ದಾಟಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶಕ್ಕೆ ಬರುವ ದಿವಸದಲ್ಲಿ ದೊಡ್ಡ ಕಲ್ಲುಗಳನ್ನು ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಿ
Cross references
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
ನಿಮ್ಮ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವದಕ್ಕೆ ನೀವು ಯೊರ್ದನನ್ನು ದಾಟಿಹೋಗಬೇಕು; ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡು ವಿರಿ.ನಾನು ಈಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ನಿಯಮ ನ್ಯಾಯಗಳನ್ನು ಕಾಪಾಡಿ ನಡೆದು ಕೊಳ್ಳಬೇಕು.
ಇದಲ್ಲದೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ನೀನು ಬಂದು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ
ನೀನು ದಾಟಿಹೋದ ಮೇಲೆ ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ನೀನು ಬರುವ ಹಾಗೆ ಅವುಗಳ ಮೇಲೆ ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಬರೆಯಬೇಕು.
ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ಜನರೆಲ್ಲರು ಯೊರ್ದನನ್ನು ದಾಟಿ ಮುಗಿಸಿದಾಗ ಕರ್ತನು ಯೆಹೋಶುವ ನೊಂದಿಗೆ ಮಾತನಾಡಿ--
ಯೆಹೋಶುವನು ಅವರಿಗೆ--ನೀವು ಯೊರ್ದನಿನ ಮಧ್ಯದಲ್ಲಿ ನಿಮ್ಮ ದೇವರಾದ ಕರ್ತನ ಮಂಜೂಷದ ಮುಂದೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಹೋಗಿರಿ.
ಆಗ ಅವರು ಅದರ ಮೇಲೆ ಕರ್ತನಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.
ಅಲ್ಲಿ ಅವನು ಮೋಶೆ ಇಸ್ರಾಯೇಲ್ ಮಕ್ಕಳ ಮುಂದೆ ಬರೆದಿದ್ದ ನ್ಯಾಯಪ್ರಮಾಣದ ಪ್ರತಿಯನ್ನು ಕಲ್ಲುಗಳಲ್ಲಿ ಬರೆದನು.
ಕಬ್ಬಿಣದ ಕಂಠದಿಂದ ಸೀಸದ ಸಂಗಡ ನಿತ್ಯವಾಗಿ ಬಂಡೆಯಲ್ಲಿ ಅವುಗಳು ಕೆತ್ತಲ್ಪಟ್ಟಿದ್ದರೆ, ಎಷ್ಟೋ ಒಳ್ಳೇದು!
ಅವರಿಗೆ ಒಂದು ಹೃದಯವನ್ನು ಕೊಡು ವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು; ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು.
ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.