ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು,
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.
ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ