ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
Cross references
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ
ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.
ದೇಶದಲ್ಲಿ ಬರವು, ಜಾಡ್ಯವು, ಉರಿಗಾಳಿಯು, ಬೂದಿಯು, ಮಿಡಿತೆ, ಕಂಬಳಿಹುಳ ಇವುಗಳು ಇದ್ದರೆ ಇಲ್ಲವೆ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣ ಗಳಲ್ಲಿ ಅವರನ್ನು ಸಂಕಟಪಡಿಸಿದರೆ ಯಾವ ಬಾಧೆ ಯಾವ ಬೇನೆ ಇದ್ದರೂ ತನ್ನ ಬಾಧೆಯನ್ನೂ ವ್ಯಸನ ವನ್ನೂ ತಿಳಿಯುವ ಒಬ್ಬ ಮನುಷ್ಯನಾದರೂ
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ.
ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.