ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
Cross references
ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋ ಧವಾಗಿ ಪಾಪಮಾಡಿದ್ದರಿಂದ ತಮ್ಮ ಶತ್ರುವಿನ ಮುಂದೆ ಸೋತು ಹೋದಾಗ ಅವರು ತಿರುಗಿ ಈ ಆಲಯದಲ್ಲಿ ನಿನ್ನ ಮುಂದೆ ನಿನ್ನ ಹೆಸರನ್ನು ಕೊಂಡಾಡಿ
ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು.
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು.
ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಶತ್ರುವು ಅವನನ್ನು ಹಿಂದಟ್ಟುವನು.
ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.