ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
Cross references
ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
ಆದದರಿಂದ ಕರ್ತನು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟನು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತಿನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.
ಆದರೆ ಇಸ್ರಾಯೇಲ್ ಮಕ್ಕಳು ಕರ್ತನ ದೃಷ್ಟಿಯಲ್ಲಿ ಕೆಟ್ಟತನಮಾಡಿದರು; ಆದದ ರಿಂದ ಕರ್ತನು ಅವರನ್ನು ಏಳು ವರುಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟನು.
ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಕರ್ತನು ಅವರನ್ನು ನಾಲ್ವತ್ತು ವರುಷದ ವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟನು.
ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
ಆಳುಗಳು ನಮ್ಮ ಮೇಲೆ ಆಳಿದ್ದಾರೆ; ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವದಿಲ್ಲ.
ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ನೀನು ಅವರನ್ನು ಕರೆದುಕೊಂಡು ಹೋಗಿ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವಂತೆ ನೀನೂ ಅವ ರೊಂದಿಗೆ ನಿನ್ನನ್ನು ಶುದ್ಧಮಾಡಿಕೊಂಡು ಅವರಿ ಗೋಸ್ಕರ ವೆಚ್ಚಮಾಡು; ಆಗ ನಿನ್ನ ವಿಷಯವಾಗಿ ಅವರು ಕೇಳಿದವುಗಳು ಏನೂ ಅಲ್ಲವೆಂದೂ ನೀನು ಸಹ ಕ್ರಮವಾಗಿ ನಡೆಯುತ್ತಾ ನ್ಯಾಯಪ್ರಮಾಣ
ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.