ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.
Cross references
ದ್ರಾಕ್ಷೇತೋಟವನ್ನು ನೆಟ್ಟು ಅದರ ಫಲ ವನ್ನು ತಿನ್ನದೆ ಇರುವ ಮನುಷ್ಯನು ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅದರ ಫಲ ತಿನ್ನದಹಾಗೆ ಅವನು ಸಹ ತಿರುಗಿಕೊಂಡು ತನ್ನ ಮನೆಗೆ ಹೋಗಲಿ.
ಹೆಂಡತಿ ಯನ್ನು ನಿಶ್ಚಯಿಸಿಕೊಂಡು ಆಕೆಯನ್ನು ಮದುವೆ ಮಾಡಿಕೊಳ್ಳದ ಮನುಷ್ಯನು ಹಿಂತಿರುಗಿ ಮನೆಗೆ ಹೋಗಲಿ ಯುದ್ಧದಲ್ಲಿ ಸಾಯಲಾಗಿ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು ಎಂದು ಹೇಳಬೇಕು.
ಸೆರೆ ಯವರು ಕೂಡ ಶಾಂತವಾಗಿದ್ದಾರೆ; ಬಾಧೆಪಡಿಸುವ ವನ ಶಬ್ದವನ್ನು ಕೇಳುವದಿಲ್ಲ.
ದುಡಿದದ್ದನ್ನ್ನು ನುಂಗದೆ ತಿರುಗಿ ಕೊಡುವನು; ಆಸ್ತಿಯ ಮೇರೆಗೆ ಬದಲು ಕೊಡುವನು; ಅವನು ಉಲ್ಲಾಸ ಹೊಂದುವದಿಲ್ಲ.
ನನ್ನ ಹೆಂಡತಿ ಮತ್ತೊಬ್ಬನಿ ಗೊಸ್ಕರ ಬೀಸಲಿ; ಮತ್ತೊಬ್ಬರು ಅವಳ ಮೇಲೆ ಒರಗಲಿ.
ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು.
ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ಇದಲ್ಲದೆ, ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷೇ ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.
ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕೂಡ್ರುವ ಅರಸುಗಳನ್ನೂ ಯಾಜಕರನ್ನೂ ಪ್ರವಾದಿ ಗಳನ್ನೂ ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.
ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
ಅವರು ಚೀಯೋನಿನಲ್ಲಿ ಹೆಂಗಸರನ್ನೂ ಯೆಹೂದದ ನಗರಗಳಲ್ಲಿ ಕನ್ಯೆಯರನ್ನೂ ಕೆಡಿಸಿದರು.
ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ.
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
ಆದದರಿಂದ ಅವರ ಸಂಪತ್ತು ಕೊಳ್ಳೆಯಾಗುವದು, ಅವರ ಮನೆಗಳು ಹಾಳಾಗು ವವು; ಅವರು ಮನೆಗಳನ್ನು ಕಟ್ಟಿ ವಾಸಮಾಡರು; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.