ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.
Cross references
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೇ ವರುಷದಲ್ಲಿ ಏಲನ ಮಗನಾದ ಹೋಶೇಯನು ಸಮಾರ್ಯದಲ್ಲಿ ಇಸ್ರಾ ಯೇಲಿನ ಮೇಲೆ ಒಂಭತ್ತು ವರುಷ ಆಳಿದನು.
ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು.
ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ಕರ್ತನು ನನಗೆ ಜ್ಞಾನವನ್ನು ಕೊಟ್ಟನು; ನಾನು ತಿಳುಕೊಂಡೆನು; ಆಗ ಅವರ ಕ್ರಿಯೆಗಳನ್ನು ನೀನು ನನಗೆ ತೋರಿಸಿದಿ.
ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು.
ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.