ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.
Cross references
ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.
ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು.
ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ಇಗೋ, ನಾನು ಬಾಷನ ಸಂತತಿಯನ್ನೂ ಅವನ ಮನೆಯ ಸಂತತಿಯನ್ನೂ ತೆಗೆದು ಹಾಕಿ ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.
ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.
ಇಸ್ರಾಯೇಲಿನ ಮಕ್ಕಳು ಬಹಳ ದಿವಸಗಳ ವರೆಗೆ ಅರಸನಿಲ್ಲದೆ ಪ್ರಧಾ ನನಿಲ್ಲದೆ ಬಲಿ ಇಲ್ಲದೆ ವಿಗ್ರಹವಿಲ್ಲದೆ ಎಫೋದ್ ಇಲ್ಲದೆ ವಿಗ್ರಹಗಳು ಇಲ್ಲದೆ ಇರುವರು.ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.