Home Bibles ದ್ವಿತೀಯೋಪದೇಶಕಾಂಡ 28:62 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 28:62 · ಕನ್ನಡ ಬೈಬಲ್

ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

Cross references

ಲೇವ್ಯಕಾಂಡ 26:22

ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.

ದ್ವಿತೀಯೋಪದೇಶಕಾಂಡ 1:10

ನಿಮ್ಮ ದೇವರಾದ ಕರ್ತನು ನಿಮ್ಮನ್ನು ಹೆಚ್ಚಿಸಿದ್ದಾನೆ. ಇಗೋ, ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.

ದ್ವಿತೀಯೋಪದೇಶಕಾಂಡ 1:11

ನೀವು ಈಗ ಇರುವದಕ್ಕಿಂತಲೂ ನಿಮ್ಮನ್ನು ಸಾವಿರದಷ್ಟು ಹೆಚ್ಚು ಮಾಡಿ ನಿಮಗೆ ಪ್ರಮಾಣ ಮಾಡಿದ ಹಾಗೆ ನಿಮ್ಮ ಪಿತೃಗಳ ದೇವರಾದ ಕರ್ತನು ಆಶೀರ್ವದಿಸಲಿ.

ದ್ವಿತೀಯೋಪದೇಶಕಾಂಡ 4:27

ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ದ್ವಿತೀಯೋಪದೇಶಕಾಂಡ 10:22

ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.

2 ಅರಸುಗಳು 13:7

ಆದರೂ ಯೆಹೋವಾಹಾಜನಿಗೆ ಐವತ್ತು ಕುದುರೆ ರಾಹುತ ರನ್ನೂ ಹತ್ತು ರಥಗಳನ್ನೂ ಹತ್ತು ಸಾವಿರ ಕಾಲಾಳು ಗಳನ್ನೂ ಹೊರತು ಜನರಲ್ಲಿ ಏನೂ ಬಿಡಲಿಲ್ಲ. ಯಾಕಂದರೆ ಅರಾಮ್ಯರ ಅರಸನು ಅವರನ್ನು ಸಂಹ ರಿಸಿ ತುಳಿಯಲ್ಪಟ್ಟ ಧೂಳಿನ ಹಾಗೆ ಮಾಡಿದ್ದನು.

2 ಅರಸುಗಳು 24:14

ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.

ನೆಹೆಮ್ಯ 7:4

ಆಗ ಪಟ್ಟಣವು ವಿಸ್ತಾರವಾಗಿಯೂ ದೊಡ್ಡದಾ ಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚ ವಾಗಿದ್ದರು; ಮನೆಗಳು ಕಟ್ಟಲ್ಪಡಲಿಲ್ಲ.

ನೆಹೆಮ್ಯ 9:23

ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿ ಅವರು ಸ್ವಾಧೀನಮಾಡಿಕೊಳ್ಳಲು ಹೋಗುವರೆಂದು ನೀನು ಅವರ ಪಿತೃಗ ಳಿಗೆ ವಾಗ್ದಾನಮಾಡಿದ ದೇಶದಲ್ಲಿ ಅವರನ್ನು ಬರಮಾಡಿದಿ;

ಯೆಶಾಯ 1:9

ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.

ಯೆಶಾಯ 6:11

ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ

ಯೆಶಾಯ 6:13

ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್‌ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.

ಯೆಶಾಯ 24:6

ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.

ಯೆರೆಮಿಯ 42:2

ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.

ಆಮೋಸ 5:3

ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.

ಮಾರ್ಕ 13:20

ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ.

ರೋಮಾಪುರದವರಿಗೆ 9:27

ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.

Interlinear

Choose Theme