ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.
Cross references
ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ ಅವರು ಕತ್ತಿಯಿಂದ ನಿಮ್ಮ ಮುಂದೆ ಬೀಳುವರು.
ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು.
ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
ಆಗ ಸಮುವೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ--ನೀವು ನಿಮ್ಮ ಪೂರ್ಣಹೃದಯದಿಂದ ಕರ್ತನ ಕಡೆಗೆ ತಿರುಗಿ ನಿಮ್ಮಲ್ಲಿರುವ ಅನ್ಯದೇವರುಗಳನ್ನೂ ಅಷ್ಟೋ ರೆತ್ನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ ನಿಮ್ಮ ಹೃದಯವನ್ನು ಕರ್ತನಿಗೆ ಸಿದ್ಧಮಾಡಿ ಆತನೊಬ್ಬನನ್ನೇ ಸೇವಿಸಿದರೆ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಗಳೊ ಳಗಿಂದ ತಪ್ಪಿಸುವನು.
ಸಮುವೇಲನು ದಹನಬಲಿಯನ್ನು ಅರ್ಪಿಸುವಾಗ ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸವಿಾಪಕ್ಕೆ ಬಂದರು. ಆಗ ಕರ್ತನು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಸೋಲಿ ಸಿದನು; ಅವರು ಇಸ್ರಾಯೇಲಿನ ಮುಂದೆ ಹೊಡೆ ಯಲ್ಪಟ್ಟರು.
ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು; ಅವರನ್ನು ಸಂಹರಿಸಿಬಿಡುವ ವರೆಗೂ ನಾನು ಹಿಂತಿರು ಗಲಿಲ್ಲ.
ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
ಆಸನು ತನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡಿದನು.
ಆದರೆ ಕೂಷಿಯನಾದ ಜೆರಹನು ಅವರಿಗೆ ವಿರೋ ಧವಾಗಿ ಹೊರಟು ಮಾರೇಷದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ರಾಣುವೆಯೂ ಮುನ್ನೂರು ರಥಗಳೂ ಇದ್ದವು.
ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
ಆಗ ಕರ್ತನು ತನ್ನ ದೂತನನ್ನು ಕಳುಹಿಸಿದನು; ಅವನು ಅಶ್ಶೂರಿನ ಅರಸನ ದಂಡಿನಲ್ಲಿರುವ ಸಮಸ್ತ ಪರಾ ಕ್ರಮಶಾಲಿಗಳನ್ನೂ ನಾಯಕರನ್ನೂ ಅಧಿಪತಿಗಳನ್ನೂ ನಿರ್ಮೂಲಮಾಡಿದನು. ಹೀಗೆ ಇವನು ಲಜ್ಜಾ ಮುಖದಿಂದ ತನ್ನ ದೇಶಕ್ಕೆ ತಿರುಗಿದನು. ಅವನು ತನ್ನ ದೇವರ ಮನೆಯಲ್ಲಿ ಪ್ರವೇಶಿಸಿದಾಗ ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಕತ್ತಿಯಿಂದ ಕೊಂದುಹಾಕಿದರು.
ಅವರು ಏಳಲಾರದ ಹಾಗೆ ಅವ ರಿಗೆ ಗಾಯ ಮಾಡಿದೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದಿದ್ದಾರೆ.
ಇದ ಲ್ಲದೆ ಅವನ ಮುಂದೆ ವೈರಿಗಳನ್ನು ಹೊಡೆದು ಬಿಡು ವೆನು; ಅವನ ಹಗೆಯವರನ್ನು ಸಂಕಟಪಡಿಸುವೆನು.