ಅಂಥವನನ್ನು ಕರ್ತನು ಉಳಿಸುವದಿಲ್ಲ; ಆಗಲೇ ಕರ್ತನ ಕೋಪವೂ ರೋಷವೂ ಆ ಮನುಷ್ಯನ ಮೇಲೆ ಹೊಗೆ ಹಾಯುವವು. ಈ ಪುಸ್ತಕದಲ್ಲಿ ಬರೆದಿ ರುವ ಶಾಪವೆಲ್ಲಾ ಅವನ ಮೇಲೆ ನೆಲೆಯಾಗುವದು; ಕರ್ತನು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ರೋಷವುಳ್ಳವನೆಂದು ಹೆಸರುಳ್ಳ ಕರ್ತನು ರೋಷ ವುಳ್ಳ ದೇವರಾಗಿರುವದರಿಂದ ನೀನು ಬೇರೆ ದೇವರು ಗಳನ್ನು ಆರಾಧಿಸಬಾರದು.
ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಓ ದೇವರೇ, ಸದಾಕಾಲಕ್ಕೆ ತಳ್ಳಿಬಿಟ್ಟದ್ದೇಕೆ? ನಿನ್ನ ಮೇವಿನ ಕುರಿಮಂದೆಗೆ ವಿರೋಧವಾಗಿ ನಿನ್ನ ಕೋಪವು ಹೊಗೆಯಾಡುವದು ಯಾಕೆ?
ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ಕರ್ತನೇ, ನೀನು ಯಾವಾಗಲೂ ಕೋಪ ಮಾಡು ವದೂ ನಿನ್ನ ರೋಷವು ಬೆಂಕಿಯ ಹಾಗೆ ಉರಿಯು ವದೂ ಎಷ್ಟರವರೆಗೆ?
ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲ್ಪಡುವರು, ಅಪರಾಧಿ ಗಳು ಬೇರು ಸಹಿತವಾಗಿ ಅದರಿಂದ ಕೀಳಲ್ಪಡುವರು.
ಮನುಷ್ಯನ ಕ್ರೋಧವು ಮತ್ಸರವಾಗಿದೆ; ಆದದರಿಂದ ಮುಯ್ಯಿ ತೀರಿಸುವ ದಿನದಲ್ಲಿ ಅವನು ಕ್ಷಮೆತೋರುವದಿಲ್ಲ.ಅವನು ಯಾವ ಈಡನ್ನು ಲಕ್ಷಿಸುವದಿಲ್ಲ; ಇದ ಲ್ಲದೆ ನೀನು ಎಷ್ಟು ಲಂಚಕೊಟ್ಟರೂ ಅವನು ಒಪ್ಪುವದಿಲ್ಲ.
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು; ಪ್ರೀತಿಯು ಮರಣದ ಹಾಗೆ ಬಲವಾಗಿರುವದು; ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು; ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.
ಆದಕಾರಣ ನನ್ನ ಜೀವದಾಣೆ, ದೇವರಾದ ಕರ್ತನು --ನಿಶ್ಚಯವಾಗಿ ನೀನು ನನ್ನ ಪರಿಶುದ್ಧ ಸ್ಥಳವನ್ನು ನಿನ್ನ ಎಲ್ಲಾ ಹೇಸಿಗೆಗಳಿಂದಲೂ ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ ನಾನೂ ಸಹ ನಿನ್ನನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವದಿಲ್ಲ, ಇಲ್ಲವೆ ಕಟಾಕ್ಷವನ್ನು ತೋರಿಸುವದಿಲ್ಲ.
ನನ್ನ ಕಣ್ಣುಗಳು ನಿನ್ನನ್ನು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸು ವದೂ ಇಲ್ಲ, ಆದರೆ ನಿನ್ನ ಮಾರ್ಗಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ, ನಿನ್ನ ಅಸಹ್ಯಗಳು ನಿನ್ನ ಮಧ್ಯೆ ಇರುವವು, ನಾನೇ ಕರ್ತನೆಂದು ನಿನಗೆ ತಿಳಿಯುವದು.
ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.
ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿ ದನು; ಆಗ ಆತ್ಮನು ನನ್ನನ್ನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ಎತ್ತಿ ನನ್ನನ್ನು ದೇವರದರ್ಶನಗಳಲ್ಲಿ ಯೆರೂ ಸಲೇಮಿಗೆ ಉತ್ತರದ ಕಡೆಗೆ ಎದುರಾಗಿರುವ ಒಳ ಬಾಗಲಿನ ಕಡೆಗೆ ಅಸೂಯೆ ಎಬ್ಬಿಸುವ ವಿಗ್ರಹವು ಇದ್ದಲ್ಲಿಗೆ ತೆಗೆದುಕೊಂಡು ಹೋದನು.
ಆಮೇಲೆ ಆತನು ನನಗೆ --ಮನುಷ್ಯಪುತ್ರನೇ, ಈಗ ಉತ್ತರದ ಕಡೆಗೆ ನಿನ್ನ ಕಣ್ಣುಗಳನ್ನು ಎತ್ತು ಅಂದಾಗ ನಾನು ಉತ್ತರದ ಕಡೆಗೆ ಕಣ್ಣುಗಳನ್ನೆತ್ತಿದೆನು; ಇಗೋ, ಉತ್ತರದಲ್ಲಿ ಯಜ್ಞ ವೇದಿಯ ಬಾಗಿಲಲ್ಲಿ ಅಸೂಯೆ ವಿಗ್ರಹವು ಪ್ರವೇಶ ದಲ್ಲಿತ್ತು.
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
ಇದಲ್ಲದೆ ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು; ಅವರು ನಿನ್ನಲ್ಲಿ ಕೋಪತೀರಿಸಿ ಕೊಳ್ಳುವರು; ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದು ಹಾಕುವರು; ನಿನ್ನಲ್ಲಿ ಉಳಿದವರು ಕತ್ತಿಯಿಂದ ಬೀಳು ವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.
ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿಶ್ಚಯವಾಗಿ ನನ್ನ ರೋಷದ ಬೆಂಕಿ ಯಿಂದ ಅನ್ಯಜನಾಂಗಗಳಲ್ಲಿ ಉಳಿದವರಿಗೂ ಎಲ್ಲಾ ಎದೋಮಿಗೆ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶ ವನ್ನು ಕೊಳ್ಳೆಯಾಗಿ ಹೊರಗೆ ಹಾಕುವ ಹಾಗೆ ತಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದಾರೆ.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.