ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
Cross references
ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು.
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
ಪ್ರವಾಹಗಳು ಇಳಿಜಾರಾಗಿ ಮಾರ್ಪಡುವದೂ; ಅದರ ದೂಳು ಗಂಧಕವಾಗುವದು; ದೇಶವು ಉರಿ ಯುವ ಇಳಿಜಾರು ಪ್ರದೇಶವಾಗುವದು.
ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.
ಓ ಇಸ್ರಾಯೇಲಿನ ಮನೆತನದ ವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡ ಕೂಡದೋ ಎಂದು ಕರ್ತನು ಅನ್ನುತ್ತಾನೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.
ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಸ್ವಸ್ಥವಾಗುವದಿಲ್ಲ, ಅವು ಉಪ್ಪಿಗೆ ಒಪ್ಪಿಸಲ್ಪಡುವವು.
ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ಉಪ್ಪು ಒಳ್ಳೇದು; ಆದರೆ ಉಪ್ಪು ತನ್ನ ರುಚಿ ಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತರಿಂದ ರುಚಿ ಬಂದೀತು?ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.