ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
Cross references
ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು.
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ಕಠಿಣಪಡಿಸಿ ಆತನ ಕಟ್ಟಳೆಗಳನ್ನೂ ಆತನು ತಮ್ಮ ಪಿತೃಗಳ ಸಂಗಡ ಮಾಡಿದ ಆತನ ಒಡಂಬಡಿಕೆಯನ್ನೂ ಆತನು ಅವರಿಗೆ ಹೇಳಿದ ಸಾಕ್ಷಿ ಗಳನ್ನೂ ಅಲಕ್ಷ್ಯಮಾಡಿ ವ್ಯರ್ಥವಾದದ್ದನ್ನು ಹಿಂಬಾ ಲಿಸಿ ವ್ಯರ್ಥವಾದವರಾಗಿ -- ನೀವು ಅವರ ಹಾಗೆ ಮಾಡಬೇಡಿರೆಂದು ಕರ್ತನು ಅವರಿಗೆ ಆಜ್ಞಾಪಿಸಿದರೂ ಅವರ ಸುತ್ತಲಿರುವ ಅನ್ಯಜನಾಂಗಗಳ ಹಿಂದೆ ಹೋದರು.
ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.
ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
ಭೂ ರಾಜರೂ ವಿರೋಧಿಯೂ ಶತ್ರುವೂ ಯೆರೂಸಲೇ ಮಿನಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.
ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ; ನೀನು ಒಡಂಬಡಿಕೆಯನ್ನು ವಿಾರಿ ನನ್ನ ಆಣೆಯನ್ನು ತಿರಸ್ಕರಿಸಿರುವಿ.
ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.