ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
Cross references
ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.
ಅದಕ್ಕವನು--ಸೈನ್ಯಗಳ ದೇವ ರಾದ ಕರ್ತನಿಗೋಸ್ಕರ ನಾನು ಬಹು ರೋಷವುಳ್ಳವ ನಾಗಿದ್ದೇನೆ; ಯಾಕಂದರೆ ಇಸ್ರಾಯೇಲಿನ ಮಕ್ಕಳು ನಿನ್ನ ಒಡಂಬಡಿಕೆಯನ್ನು ಬಿಟ್ಟು ನಿನ್ನ ಬಲಿ ಪೀಠಗಳನ್ನು ಕೆಡವಿ ನಿನ್ನ ಪ್ರವಾದಿಗಳನ್ನು ಕತ್ತಿಯಿಂದ ಕೊಂದು ಹಾಕಿದ್ದಾರೆ; ನಾನು ಹೌದು, ನಾನೊಬ್ಬನೇ ಉಳಿದಿ ದ್ದೇನೆ; ಆದರೆ ಅವರು ನನ್ನ ಪ್ರಾಣವನ್ನು ತೆಗೆದುಬಿಡಲು ಹುಡುಕುತ್ತಾರೆ ಅಂದನು.
ಅವರ ವಿಗ್ರಹಗಳಿಗೆ ಸೇವೆ ಮಾಡಿದರು ಅವು ಅವರಿಗೆ ನೇಣು ಆದವು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.
ಪ್ರವಾದಿಗಳ ನಿಮಿತ್ತ ನನ್ನ ಹೃದಯವು ನನ್ನಲ್ಲಿ ಮುರಿದಿದೆ; ನನ್ನ ಎಲುಬುಗಳೆಲ್ಲಾ ಕದಲುತ್ತವೆ; ಕರ್ತನ ನಿಮಿತ್ತವೂ ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ ಮತ್ತನಾದ ಮನುಷ್ಯನ ಹಾಗೆಯೂ ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.