ನಾನೇ ನಿಮ್ಮ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವ ಹಾಗೆ ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸ ಇಲ್ಲವೆ ಮದ್ಯಗಳನ್ನು ಕುಡಿಯಲಿಲ್ಲ.
Cross references
ಇಸ್ರಾಯೇಲ್ ಮಕ್ಕಳ ಗುಣುಗುಟ್ಟು ವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತ ನಾಡಿ--ನೀವು ಸಾಯಂಕಾಲದಲ್ಲಿ ಮಾಂಸವನ್ನು ಉಣ್ಣು ವಿರಿ, ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಕರ್ತನೆಂದು ತಿಳಿದುಕೊಳ್ಳುವಿರಿ ಎಂದು ಅವರಿಗೆ ಹೇಳು ಅಂದನು.
ಇಸ್ರಾಯೇಲ್ ಮಕ್ಕಳು ವಾಸವಾಗಿರತಕ್ಕ ದೇಶಕ್ಕೆ ಬರುವ ವರೆಗೆ ನಾಲ್ವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಬರುವ ವರೆಗೂ ಅವರು ಮನ್ನವನ್ನು ತಿಂದರು.ಓಮೆರ್ ಅಂದರೆ ಎಫದಲ್ಲಿ ಹತ್ತನೆಯ ಒಂದು ಪಾಲು.
ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
ಕೋಲನ್ನು ತಕ್ಕೊಂಡು ನೀನು ನಿನ್ನ ಸಹೋದರನಾದ ಆರೋನನು ಸಭೆಯನ್ನು ಕೂಡಿಸಿ ಕೊಂಡು ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ; ಅದು ತನ್ನ ನೀರನ್ನು ಕೊಡುವದು; ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವಿ; ಸಭೆಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡುವಿ ಎಂದು ಹೇಳಿದನು.
ನಮ್ಮ ದೇವರಾದ ಕರ್ತನು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿ ದ್ದರಿಂದ ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಹೊಡೆದೆವು;
ಈ ಪ್ರಕಾರ ನಮ್ಮ ದೇವರಾದ ಕರ್ತನು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲ ರನ್ನೂ ನಮ್ಮ ಕೈಯಲ್ಲಿ ಒಪ್ಪಿಸಿದನು; ಒಬ್ಬನಾದರೂ ತಪ್ಪಿಸಿಕೊಂಡು ಅವನಿಗೆ ಉಳಿಯದೆ ಹೋಗುವ ವರೆಗೆ ಅವನನ್ನು ಹೊಡೆದೆವು.
ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
ನಿನ್ನನ್ನು ಕುಂದಿಸಿ ಹಸಿ ಯುವಂತೆ ಆತನು ಮಾಡಿದನು. ರೊಟ್ಟಿ ಮಾತ್ರದಿಂದ ಮನುಷ್ಯನು ಬದುಕುವದಿಲ್ಲವೆಂದೂ ಕರ್ತನ ಬಾಯಿ ಯೊಳಗಿಂದ ಹೊರಡುವ ಪ್ರತಿಯೊಂದು ಮಾತಿ ನಿಂದಲೂ ಮನುಷ್ಯನು ಬದುಕುತ್ತಾನೆಂದು ನಿನಗೆ ತಿಳಿಸುವ ಹಾಗೆ ನೀನು ತಿಳಿಯದಂಥ ಮತ್ತು ನಿನ್ನ ಪಿತೃಗಳು ತಿಳಿಯದಂಥ ಮನ್ನವನ್ನು ನಿನಗೆ ಉಣ್ಣಲು ಕೊಟ್ಟನು.
ಅವರ ಹಸಿವೆಗೋಸ್ಕರ ಆಕಾಶದಿಂದ ರೊಟ್ಟಿಯನ್ನೂ ಕೊಟ್ಟಿ; ಅವರ ದಾಹಕ್ಕೋಸ್ಕರ ಬಂಡೆಯಿಂದ ನೀರನ್ನು ಬರಮಾಡಿ ನೀನು ಅವರಿಗೆ ಕೊಡಲು ಪ್ರಮಾಣ ಮಾಡಿದ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವ ಹಾಗೆ ಅವರಿಗೆ ವಾಗ್ದಾನಮಾಡಿದಿ.
ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು.
ಪ್ರವೀಣತೆಗಾಗಿ ಹೋರಾಡುವ ಪ್ರತಿಯೊಬ್ಬನು ಎಲ್ಲಾ ವಿಷಯಗಳಲ್ಲಿ ಮಿತವಾಗಿರುತ್ತಾನೆ; ಅವರಾ ದರೋ ನಾಶವಾಗುವ ಕಿರೀಟವನ್ನು ಹೊಂದಿಕೊಳ್ಳು ವದಕ್ಕಾಗಿ ಹೋರಾಡುತ್ತಾರೆ; ನಾವಾದರೋ ನಾಶ ವಾಗದ ಕಿರೀಟಕ್ಕಾಗಿಯೇ ಹೋರಾಡುತ್ತೇವೆ.
ಅವರೆಲ್ಲರೂ ಆತ್ಮಿಕವಾದ ಒಂದೇ ಪಾನವನ್ನು ಕುಡಿದರು; ಯಾಕಂದರೆ ಅವರನ್ನು ಹಿಂಬಾಲಿಸಿದ ಆ ಆತ್ಮಿಕ ಬಂಡೆಯೊಳಗಿಂದ ಅವರು ಕುಡಿದರು; ಆ ಬಂಡೆಯು ಕ್ರಿಸ್ತನೇ.
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.