ಆಗ ಕರ್ತನು ನನಗೆ--ಅವನಿಗೆ ಭಯಪಡಬೇಡ; ಅವ ನನ್ನೂ ಅವನ ಜನರೆಲ್ಲರನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಒಪ್ಪಿಸುತ್ತೇನೆ; ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನ ನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು ಅಂದನು.
Cross references
ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
ಕರ್ತನು ಮೋಶೆಯ ಸಂಗಡ ಹೇಳಿದ್ದೇನಂದರೆ--ನೀನು ಅವ ನಿಗೆ ಭಯಪಡಬೇಡ; ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ದೇಶವನ್ನೂ ಕೊಟ್ಟಿದ್ದೇನೆ. ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿ ಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವನಿಗೆ ಮಾಡಬೇಕು.ಈ ಪ್ರಕಾರ ಅವರು ಅವ ನನ್ನೂ ಅವನ ಮಕ್ಕಳನ್ನೂ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು ಅವನ ದೇಶವನ್ನು ವಶಮಾಡಿಕೊಂಡರು.
ಏಳಿರಿ, ಹೊರಡಿರಿ; ಅರ್ನೋನ್ ನದಿಯನ್ನು ದಾಟಿರಿ; ಇಗೋ, ಹೆಷ್ಬೋನಿನ ಅರಸ ನಾದ ಅಮೋರಿಯನಾದ ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಕೈಯಲ್ಲಿ ಕೊಟ್ಟಿದ್ದೇನೆ, ಸ್ವಾಧೀನ ಪಡಿಸಿಕೊಳ್ಳುವದಕ್ಕೆ ಆರಂಭಮಾಡು. ಅವನ ಸಂಗಡ ಜಗಳವಾಡಿ ಯುದ್ಧಮಾಡು.
ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.
ಓ ಇಸ್ರಾಯೇಲೇ ಕೇಳು, ನೀವು ಈಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸವಿಾಪ ಬಂದಿದ್ದೀರಿ; ನಿಮ್ಮ ಹೃದಯಗಳು ಬಳಲಬಾರದು; ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂಬೇಡಿರಿ ;
ಆದರೆ ಕರ್ತನು ಯೆಹೋಶುವನಿಗೆ--ನೀನು ಅವರಿಗೆ ಭಯಪಡಬೇಡ; ಯಾಕಂದರೆ ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ, ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವದಿಲ್ಲ ಅಂದನು.
ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು.
ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲತಕ್ಕದ್ದು; ಇಗೋ, ನಿನ್ನೊಂದಿಗೆ ಪ್ರಯಾಣಮಾಡುವವರೆಲ್ಲರನ್ನು ನಿನಗೆ ದೇವರು ಕೊಟ್ಟಿದ್ದಾನೆ ಎಂದು ಹೇಳಿದನು.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ