ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
Cross references
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.
ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ
ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.
ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
ಸತ್ಯದ ಮಾರ್ಗವನ್ನು ಆದು ಕೊಂಡಿದ್ದೇನೆ; ನಿನ್ನ ನ್ಯಾಯವಿಧಿಗಳನ್ನು ಮುಂದಿಟ್ಟು ಕೊಂಡಿದ್ದೇನೆ;
ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.
ನಿನ್ನ ಕೈ ನನ್ನ ಸಹಾಯಕ್ಕಾಗಿರಲಿ; ನಿನ್ನ ಕಟ್ಟಳೆ ಗಳನ್ನು ನಾನು ಆದುಕೊಂಡಿದ್ದೇನೆ.
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
ನೀತಿಯ ಮಾರ್ಗದಲ್ಲಿ ಜೀವ ವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--
ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.
ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
ಕರ್ತನು ಹೇಳುವದನ್ನು ಈಗ ಕೇಳಿರಿ--ಎದ್ದೇಳು,ಬೆಟ್ಟಗಳ ಮುಂದೆ ವ್ಯಾಜ್ಯವಾಡು; ಗುಡ್ಡಗಳು ನಿನ್ನ ಶಬ್ದವನ್ನು ಕೇಳಲಿ.
ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.
ಯಾಕಂದರೆ ಆ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರವಾಗಿರುವವರೆಲ್ಲರಿಗೂ ಅಂತೂ ನಮ್ಮ ದೇವರಾದ ಕರ್ತನು ಕರೆಯುವವರೆಲ್ಲರಿಗೂ ಮಾಡಿಯದೆ ಎಂದು ಹೇಳಿದನು.
ನೀನು ವಿಚಾರಿಸುವದಕ್ಕೆ ಮೊದಲೇ ತಪ್ಪು ಹೊರಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಕೊಳ್ಳಬೇಕೆಂದು ದೇವರ ಮುಂದೆಯೂ ಕರ್ತನಾದ ಯೇಸು ಕ್ರಿಸ್ತನ ಮುಂದೆಯೂ ಆಯಲ್ಪಟ್ಟಿರುವ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.