ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
Cross references
ನಮ್ಮ ರಕ್ಷಣೆಯ ದೇವರೇ, ನಾವು ನಿನ್ನ ಪರಿಶುದ್ಧ ಹೆಸ ರನ್ನು ಕೊಂಡಾಡಿ ನಿನ್ನ ಸ್ತೋತ್ರದಲ್ಲಿ ಹೆಚ್ಚಳ ಪಡುವ ಹಾಗೆ ನಮ್ಮನ್ನು ರಕ್ಷಿಸು; ಜನಾಂಗಗಳೊಳಗಿಂದ ನಮ್ಮನ್ನು ತೆಗೆದು ಕೂಡಿಸು.
ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ಅವರಿಗಾಗಿ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು ತನ್ನ ಅತಿಶಯವಾದ ಕರು ಣೆಯ ಪ್ರಕಾರ ಪಶ್ಚಾತ್ತಾಪಪಟ್ಟನು.
ಓ ನಮ್ಮ ದೇವರಾದ ಕರ್ತನೇ, ನಾವು ನಿನ್ನ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ ನಿನ್ನ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸು. ಅನ್ಯಜನಾಂಗಗಳೊಳಗಿಂದ ನಮ್ಮನ್ನು ಹೊರಗೆ ಬರಮಾಡು.ಇಸ್ರಾಯೇಲಿನ ದೇವರಾದ ಕರ್ತನಿಗೆ ಯುಗಯುಗಾಂತರಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲಾ ಆಮೆನ್ ಎಂದು ಹೇಳಲಿ. ನೀವು ಕರ್ತನನ್ನು ಸ್ತುತಿಸಿರಿ.
ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
ಆಗ ಕರ್ತನು ನನಗೆ--ಯೆರೆವಿಾಯನೇ, ಏನು ನೋಡುತ್ತೀ ಅಂದನು. ಆಗ ನಾನು ಅಂಜೂರದ ಹಣ್ಣುಗಳನ್ನು ನೋಡುತ್ತೇನೆ; ಒಳ್ಳೇ ಹಣ್ಣುಗಳು ಬಹಳ ಒಳ್ಳೇವು; ಕೆಟ್ಟ ಹಣ್ಣುಗಳು ಬಹಳ ಕೆಟ್ಟವುಗಳು, ತಿನ್ನ ಕೂಡದ ಹಾಗೆ ಅಷ್ಟು ಕೆಟ್ಟವಾಗಿವೆ ಅಂದೆನು.
ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.
ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
ಆತನು ದುಃಖಪಡಿಸಿದರೂ ತನ್ನ ಕೃಪಾತಿಶಯದಿಂದ ಕನಿಕರಿಸುವನು.
ಆದದರಿಂದ ನೀನು ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆಹೇಳುತ್ತಾನೆ--ನಾನು ನಿಶ್ಚ ಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ ನೀವು ಚದ ರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ; ಇಸ್ರಾ ಯೇಲ್ ದೇಶವನ್ನು ನಿಮಗೆ ಕೊಡುತ್ತೇನೆ.
ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ ಕಾರ್ಮುಗಿಲಿನ ದಿನದಲ್ಲಿ ಚದರಿ ಹೋದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು.
ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
ಹಾಗೆಯೇ ನೀವು ಹೊಂದಿದ ಕರುಣೆಯ ಮೂಲಕ ಇವರೂ (ಮುಂದೆ) ಕರುಣೆಯನ್ನು ಹೊಂದುವಂತೆ ಈಗ ನಂಬದವ ರಾಗಿದ್ದಾರೆ.