ಇದಲ್ಲದೆ ನಿನ್ನ ದೇವರಾದ ಕರ್ತನು ಆ ಶಾಪಗಳನ್ನೆಲ್ಲಾ ನಿನ್ನ ಶತ್ರುಗಳ ಮೇಲೆಯೂ ನಿನ್ನನ್ನು ಹಿಂಸಿಸಿದ ನಿನ್ನ ಹಗೆಯವರ ಮೇಲೆಯೂ ಹಾಕುವನು.
Cross references
ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು.
ಹಾಳುಮಾಡಿರಿ, ಅದರ ಅಸ್ತಿವಾರದ ವರೆಗೆ ಹಾಳು ಮಾಡಿರಿ ಎಂದು ಹೇಳಿದ ಎದೋಮಿನ ಮಕ್ಕಳನ್ನು ಯೆರೂಸಲೇಮಿನ ದಿವಸದಲ್ಲಿ ಕರ್ತನೇ, ಜ್ಞಾಪಕ ಮಾಡಿಕೋ.
ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.
ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು.
ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು.
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಕರ್ತನು ಹೀಗೆ ಹೇಳುತ್ತಾನೆ--ಗಾಜದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅದರ ದಂಡನೆಯ ಕಡೆಯಿಂದ ತಿರುಗಿಸಿಬಿಡುವದಿಲ್ಲ; ಅವ ರನ್ನು ಸೆರೆಗೆ ಒಪ್ಪಿಸುವದಕ್ಕಾಗಿ ಎದೋಮಿಗೆ ಎಲ್ಲಾ ಸೆರೆಯವರನ್ನು ಕರೆತಂದರು.
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
ಕರ್ತನು ಹೀಗೆ ಹೇಳುತ್ತಾನೆ--ಎದೋಮಿನ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತವಾಗಿ ನಾನು ಅದರ ದಂಡನೆಯಿಂದ ತಪ್ಪಿಸುವದಿಲ್ಲ. ಅವನು ತನ್ನ ಎಲ್ಲಾ ಕನಿಕರಗಳನ್ನು ಬಿಸಾಡಿಬಿಟ್ಟು ತನ್ನ ಸಹೋ ದರನನ್ನು ಕತ್ತಿಯ ಸಹಿತ ಹಿಂಬಾಲಿಸಿದನು. ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು; ತನ್ನ ರೌದ್ರ ವನ್ನು ನಿತ್ಯವಾಗಿ ಇಟ್ಟುಕೊಂಡನು.
ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ.
ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.