ಇದಲ್ಲದೆ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈಕೆಲಸದಲ್ಲಿ, ಗರ್ಭದ ಫಲದಲ್ಲಿ, ಪಶುಗಳ ಫಲದಲ್ಲಿ, ಭೂಮಿಯ ಫಲದಲ್ಲಿ ಒಳ್ಳೇದಕ್ಕೋಸ್ಕರ ಅಭಿವೃದ್ಧಿ ಮಾಡುವನು.
Cross references
ನಿಮಗೆ ಮಳೆಯನ್ನು ತಕ್ಕಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವದು. ಹೊಲದ ಮರಗಳು ಅವುಗಳ ಫಲವನ್ನು ಕೊಡುವವು.
ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.
ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.
ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.
ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.
ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷಪಡುವೆನು; ಅದರಲ್ಲಿ ಅಳುವ ಸ್ವರವೂ ಕೂಗುವ ಸ್ವರವೂ ಇನ್ನು ಕೇಳಲ್ಪಡುವದಿಲ್ಲ.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸು ತ್ತೇನೆ; ಅವನು ಅದನ್ನು ವಶಪಡಿಸಿಕೊಳ್ಳುವನು.
ಒಬ್ಬೊಬ್ಬನು ತನ್ನ ತನ್ನ ದಾಸ ದಾಸಿಯನ್ನು ಅವನು ಇಬ್ರೀಯನಾಗಲಿ ಇಬ್ರೀಯಳಾಗಲಿ ಇದ್ದರೆ ಸ್ವತಂತ್ರರಾಗಿ ಕಳುಹಿಸ ಬೇಕೆಂದು ಒಬ್ಬನಾದರೂ ಅವರಿಂದ ಅಂದರೆ ತನ್ನ ಸಹೋದರನಾದ ಯೆಹೂದ್ಯನಿಂದ ಸೇವೆ ತಕ್ಕೊಳ್ಳ ಬೇಡವೆಂದು ಅವರಿಗೆ ಬಿಡುಗಡೆಯನ್ನು ಸಾರಿದ ಮೇಲೆ ಯೆರೆವಿಾಯನಿಗೆ ಕರ್ತನಿಂದ ಉಂಟಾದ ವಾಕ್ಯವು.
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು.
ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
ನನ್ನ ಆನಂದವು ನಿಮ್ಮಲ್ಲಿರುವ ಹಾಗೆಯೂ ನಿಮ್ಮ ಆನಂದವು ಸಂಪೂರ್ಣವಾಗುವ ಹಾಗೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.