Home Bibles ದ್ವಿತೀಯೋಪದೇಶಕಾಂಡ 31:21 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 31:21 · ಕನ್ನಡ ಬೈಬಲ್

ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.

Cross references

ಆದಿಕಾಂಡ 6:5

ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.

ಆದಿಕಾಂಡ 8:21

ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.

ದ್ವಿತೀಯೋಪದೇಶಕಾಂಡ 30:18

ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.

ದ್ವಿತೀಯೋಪದೇಶಕಾಂಡ 31:7

ಆಗ ಮೋಶೆಯು ಯೆಹೋಶುವನನ್ನು ಕರೆದು ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ--ಬಲ ವಾಗಿರು; ಧೈರ್ಯವಾಗಿರು; ಯಾಕಂದರೆ ನೀನು ಈ ಜನರ ಸಂಗಡ ಹೋಗಿ ಕರ್ತನು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ಸೇರ ಬೇಕು; ನೀನು ಅದನ್ನು ಅವರಿಗೆ ಸ್ವಾಸ್ತ್ಯವಾಗಿ ಕೊಡ ಬೇಕು.

ಕೀರ್ತನೆಗಳು 139:2

ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;

ಯೆಶಾಯ 46:10

ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.

ಯೆಹೆಜ್ಕೇಲ 38:10

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,

ಹೊಶೇಯ 5:3

ನಾನು ಎಫ್ರಾಯಾಮನ್ನು ಬಲ್ಲೆನು ಮತ್ತು ಇಸ್ರಾ ಯೇಲು ನನಗೆ ಮರೆಯಾಗಿಲ್ಲ; ಓ ಎಫ್ರಾಯಾಮೇ, ನೀನು ಈಗಲೇ ವ್ಯಭಿಚಾರಮಾಡುತ್ತೀ, ಇಸ್ರಾಯೇಲು ಸಹ ಅಪವಿತ್ರವಾಯಿತು.

ಹೊಶೇಯ 13:5

ನಾನು ನಿನ್ನನ್ನು ಅರಣ್ಯದಲ್ಲಿಯೂ ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.

ಆಮೋಸ 5:25

ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ?

ಯೋಹಾನ 2:24

ಆದರೆ ಯೇಸು ತನ್ನನ್ನು ಅವರಿಗೆ ವಶಪಡಿಸಿ ಕೊಳ್ಳಲಿಲ್ಲ; ಯಾಕಂದರೆ ಆತನು ಎಲ್ಲರನ್ನೂ ಅರಿತ ವನಾಗಿದ್ದನು.ಆತನು ಮನುಷ್ಯರ ಅಂತರಂಗವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿಕೊಡಬೇಕಾದ ಅವಶ್ಯವಿರಲಿಲ್ಲ.

ಅಪೋಸ್ತಲರ ಕೃತ್ಯಗಳು 2:23

ಆದರೆ ದೇವರ ಸ್ಥಿರಸಂಕಲ್ಪಕ್ಕನುಸಾರವಾಗಿಯೂ ಭವಿಷ್ಯದ್‌ ಜ್ಞಾನಕ್ಕನುಸಾರವಾಗಿಯೂ ಆತನು ಒಪ್ಪಿಸಲ್ಪಟ್ಟಾಗ ನೀವು ಆತನನ್ನು ಹಿಡಿದು ದುಷ್ಟರ ಕೈಗಳಿಂದ ಶಿಲುಬೆಗೆ ಹಾಕಿಸಿಕೊಂದಿರಿ.

ಅಪೋಸ್ತಲರ ಕೃತ್ಯಗಳು 4:28

ನಿನ್ನ ಹಸ್ತವು ಮತ್ತು ನಿನ್ನ ಸಂಕಲ್ಪವು ಮೊದಲೇ ನಿಶ್ಚಯಿಸಿದ್ದನ್ನು ಮಾಡಿದರು.

Interlinear

Choose Theme