ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
Cross references
ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ.
ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,
ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ದುಷ್ಟರೂ ದೇವರನ್ನು ಮರೆಯುವ ಎಲ್ಲಾ ಜನಾಂಗಗಳೂ ನರಕಕ್ಕೆ ಇಳಿಯುವರು.
ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ
ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.
ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.