ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.
Cross references
ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.
ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.
ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.
ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.
ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;
ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.
ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.