Home Bibles ದ್ವಿತೀಯೋಪದೇಶಕಾಂಡ 32:23 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 32:23 · ಕನ್ನಡ ಬೈಬಲ್

ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

Cross references

ಲೇವ್ಯಕಾಂಡ 26:18

ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.

ಲೇವ್ಯಕಾಂಡ 26:24

ನಾನು ಸಹ ನಿಮಗೆ ವಿರೋಧವಾಗಿ ನಡೆದು ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ದ್ವಿತೀಯೋಪದೇಶಕಾಂಡ 28:15

ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 29:21

ಈ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಕರ್ತನು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವನು.

2 ಅರಸುಗಳು 22:17

ಅವರು ತಮ್ಮ ಎಲ್ಲಾ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ನನ್ನ ಕೋಪ ಈ ಸ್ಥಳದ ಮೇಲೆ ಹೊತ್ತಿ ಉರಿಯುವದು, ಆರಿಹೋಗದು ಎಂದು ಕರ್ತನು ಹೇಳುತ್ತಾನೆ.

ಕೀರ್ತನೆಗಳು 7:12

ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.

ಕೀರ್ತನೆಗಳು 7:14

ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು.

ಯೆಶಾಯ 24:17

ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.

ಯೆಶಾಯ 26:15

ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.

ಯೆರೆಮಿಯ 15:2

ಈ ಸ್ಥಳದಲ್ಲಿ ನೀನು ಹೆಂಡತಿಯನ್ನು ತಕ್ಕೊಳ್ಳಬೇಡ; ನಿನಗೆ ಕುಮಾರರಾಗಲಿ ಕುಮಾರ್ತೆಯರಾಗಲಿ ಈ ಸ್ಥಳದಲ್ಲಿ ಇರಬಾರದು;

ವಿಲಾಪಗಳು 3:13

ಆತನು ತನ್ನ ಬತ್ತಳಿಕೆಯಲ್ಲಿನ ಬಾಣಗಳು ನನ್ನ ಅಂತರಂಗಗಳಲ್ಲಿ ತೂರಿಹೋಗುವ ಹಾಗೆ ಮಾಡಿ ದ್ದಾನೆ.

ಯೆಹೆಜ್ಕೇಲ 5:16

ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.

ಯೆಹೆಜ್ಕೇಲ 9:6

ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು.

ಯೆಹೆಜ್ಕೇಲ 14:21

ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?

ಮತ್ತಾಯ 24:7

ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು.

Interlinear

Choose Theme