ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು.
Cross references
ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ.
ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
ನಿಮ್ಮ ಮೇಲೆ ಕಾಡುಮೃಗಗಳು ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದ ವರನ್ನಾಗಿ ಮಾಡಿ ನಿಮ್ಮ ದನಗಳನ್ನು ತಿಂದುಬಿಡುವವು ಮತ್ತು ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವವು; ನಿಮ್ಮ ಮಾರ್ಗಗಳು ಹಾಳಾಗಿಹೋಗುವವು.
ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.
ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ.
ಪರಾ ಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳು ನಿನಗೆ ಕೊಡಲ್ಪಡಲಿ.
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು; ಹಾವಿಗೋ ಅದರ ಆಹಾರವು ಮಣ್ಣೇ; ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ.
ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ.
ಏಕೆ ನನ್ನ ನೋವು ನಿತ್ಯವಾಗಿಯೂ ನನ್ನ ಗಾಯವು ವಾಸಿಯಾಗಲೊ ಲ್ಲದೆಯೂ ಸ್ವಸ್ಥವಾಗದೆಯೂ ಇದೆ? ನೀನು ನನಗೆ ಒಟ್ಟಾರೆ ನೀರು ಬತ್ತುವ ಕಳ್ಳ ತೊರೆಯಂತೆಯೂ ಸ್ಥಿರ ವಿಲ್ಲದ ನೀರಿನಂತೆಯೂ ಇರಬೇಕೋ.
ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ--
ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.
ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
ನಾನು ದುಷ್ಟ ಮೃಗಗಳನ್ನು ದೇಶದಲ್ಲಿ ಹಾದು ಹೋಗುವಂತೆ ಮಾಡಿ ಅದನ್ನು ನಿರ್ಜನಪಡಿಸಿ, ಹಾಳು ಮಾಡಿ ಯಾರೂ ಮೃಗಗಳ ನಿಮಿತ್ತ ಹಾದು ಹೋಗದಂತೆ ಮಾಡಿದರೆ
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.