ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
Cross references
ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.
ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.
ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.
ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.
ಮೊಲೆಕೂಸಿನ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ, ಎಳೆಕೂಸುಗಳು ರೊಟ್ಟಿ ಕೇಳುತ್ತವೆ; ಆದರೆ ಅವರಿಗೆ ಯಾರೂ ಕೊಡುವದಿಲ್ಲ.
ಹೊರಗೆ ಕತ್ತಿಯೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊಲದಲ್ಲಿರುವವನನ್ನು ಕತ್ತಿಯು ಸಾಯಿಸುವದು; ಪಟ್ಟಣದಲ್ಲಿರುವವನನ್ನು ವ್ಯಾಧಿಯೂ ಬರವೂ ತಿಂದು ಬಿಡುವದು.
ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಆದದರಿಂದ ಅವರ ಆಲೋಚನೆಗಳ ನಿಮಿತ್ತ ಕತ್ತಿಯು ಅವರ ಪಟ್ಟಣಗಳ ಮೇಲೆ ನೆಲೆಯಾಗಿದ್ದು ಅಲ್ಲಿನ ಕೊಂಬೆ ಗಳನ್ನು ಸುಟ್ಟು ಅವರನ್ನು ನುಂಗಿಬಿಡುತ್ತದೆ.
ನೀನು ಉಂಡು ತೃಪ್ತಿಯಾಗದೆ ಇರುವಿ; ನಿನ್ನೊಳಗೆ ನಿನ್ನ ಬೀಳ್ವಿಕೆಯು ಇರುವದು; ನೀನು ಹಿಡಿದು ತಪ್ಪಿಸದೆ ಇರುವಿ; ನೀನು ತಪ್ಪಿಸುವಂಥದ್ದನ್ನು ನಾನು ಕತ್ತಿಗೆ ಒಪ್ಪಿಸುವೆನು.
ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.