Home Bibles ದ್ವಿತೀಯೋಪದೇಶಕಾಂಡ 32:27 · ಕನ್ನಡ ಬೈಬಲ್
ದ್ವಿತೀಯೋಪದೇಶಕಾಂಡ 32:27 · ಕನ್ನಡ ಬೈಬಲ್

ಅವರ ಶತ್ರುಗಳು--ನಮ್ಮ ಕೈಗಳು ಉನ್ನತವಾಗಿವೆ ಎಂದೂ ಕರ್ತನು ಇವುಗಳನ್ನೆಲ್ಲಾ ಮಾಡಲಿಲ್ಲವೆಂದೂ ಅಂದುಕೊಂಡು ಗರ್ವದಿಂದ ನಡೆಯುವ ಶತ್ರುವಿನ ಕೋಪಕ್ಕೆ ಹೆದರದೆ ಹೋದೆನು.

Cross references

ನಿರ್ಗಮಕಾಂಡ 32:12

ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು? ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ, ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು.

ಅಂಕೆಗಳ ಪುಸ್ತಕ 14:15

ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು--

ದ್ವಿತೀಯೋಪದೇಶಕಾಂಡ 9:28

ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

ಯೆಹೋಶುವ 7:9

ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.

1 ಸಮುವೇಲ 12:22

ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

1 ಅರಸುಗಳು 20:28

ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾ ಯೇಲಿನ ಅರಸನಿಗೆ--ಕರ್ತನು ತಗ್ಗುಗಳ ದೇವರಾ ಗಿರದೆ ಪರ್ವತಗಳ ದೇವರಾಗಿದ್ದಾನೆಂಬದಾಗಿ ಅರಾ ಮ್ಯರು ಹೇಳಿದ್ದರಿಂದ ನಾನು ಕರ್ತನಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನೆಂದು ಕರ್ತನು ಹೇಳುತ್ತಾನೆ ಅಂದನು.

ಕೀರ್ತನೆಗಳು 115:1

ನಮಗಲ್ಲ, ಓ ಕರ್ತನೇ, ನಮಗಲ್ಲ, ನಿನ್ನ ಹೆಸರಿಗೆ ಮಾತ್ರ, ನಿನ್ನ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ಘನವುಂಟಾಗಲಿ.

ಕೀರ್ತನೆಗಳು 140:8

ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.

ಕೀರ್ತನೆಗಳು 140:9

ನನ್ನ ಸುತ್ತಲಿರುವವರ ವಿಷವೂ ಅವರ ತುಟಿಗಳ ಕಾಟವೂ ಅವರನ್ನು ಮುಚ್ಚಲಿ.

ಯೆಶಾಯ 10:8

ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?

ಯೆಶಾಯ 10:12

ಆದಕಾರಣ, ಕರ್ತನು ಚೀಯೋನ್‌ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.

ಯೆಶಾಯ 37:10

ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;

ಯೆಶಾಯ 37:12

ನನ್ನ ಪಿತೃಗಳು ಗೋಜಾನ್‌, ಖಾರಾನ್‌, ರೆಚೆಫ್‌ ಎಂಬ ಪಟ್ಟಣ ಗಳನ್ನು ತೆಲಸ್ಸಾರ್‌ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?

ಯೆಶಾಯ 37:28

ನೀನು ವಾಸಿಸುವದು ಹೊರಗೆ ಹೋಗುವದು, ಒಳಗೆ ಬರುವದು; ನೀನು ನನ್ನ ಮೇಲೆ ರೌದ್ರಾವೇಶನಾಗಿ ರುವದನ್ನೂ ನಾನು ಬಲ್ಲೆನು.

ಯೆಶಾಯ 37:35

ಈ ಪಟ್ಟಣವನ್ನು ನನಗಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಇದನ್ನು ಕಾಪಾಡು ವೆನು ಎಂದು ಕರ್ತನು ಹೇಳುತ್ತಾನೆ.

ಯೆಶಾಯ 47:7

ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.

ಯೆಶಾಯ 48:11

ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.

ಯೆರೆಮಿಯ 19:4

ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.

ವಿಲಾಪಗಳು 1:9

ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.

ಯೆಹೆಜ್ಕೇಲ 20:13

ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್‌ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.

ಯೆಹೆಜ್ಕೇಲ 20:20

ನನ್ನ ಸಬ್ಬತ್ತುಗಳನ್ನು ಪರಿಶುದ್ಧಮಾಡಿರಿ ನಾನೇ ನಿಮ್ಮ ದೇವರಾದ ಕರ್ತನು ಎಂದು ಅವು ನಿಮಗೂ ನನಗೂ ನೀವು ತಿಳಿಯುವ ಹಾಗೆ ಗುರುತುಗಳಾಗಿರುವವು.

ದಾನಿಯೇಲ 4:27

ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.

ದಾನಿಯೇಲ 4:30

ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.

ಜೆಕರ್ಯ 1:14

ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.

Interlinear

Choose Theme