ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
Cross references
ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ಜನರನ್ನು ನನಗೆ ಅಧೀನಪಡಿಸುತ್ತಾನೆ.
ಅದು ನನ್ನ ದೃಷ್ಟಿಗೆ ಕಷ್ಟವಾಗಿತ್ತು. ಅವರ ಅಂತ್ಯವನ್ನು ಗ್ರಹಿಸಿ ಕೊಂಡೆನು.
ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ; ನಾವು ಇಸ್ರಾ ಯೇಲಿನ ಪರಿಶುದ್ಧನ ಆಲೋಚನೆಯನ್ನು ತಿಳುಕೊ ಳ್ಳುವ ಹಾಗೆ ಅದು ಸವಿಾಪಿಸಿ ಬರಲಿ ಎಂದು ಹೇಳು ವವರಿಗೆ ಅಯ್ಯೋ!
ಅವರಲ್ಲಿ ಅನೇಕರು ಎಡವಿಬಿದ್ದು, ಹೊಡೆಯಲ್ಪಟ್ಟು ಬಲೆಗೆ ಸಿಕ್ಕಿ ಬೀಳುವರು.
ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ಕರ್ತನು ರೋಷವುಳ್ಳಂಥ, ಮುಯ್ಯಿಗೆಮುಯ್ಯಿ ಕೊಡುವಂಥ ದೇವರು; ಕರ್ತನು ಮುಯ್ಯಿಗೆ ಮುಯ್ಯಿ ಕೊಡುವಂಥ ಉಗ್ರವುಳ್ಳಾತನು, ಕರ್ತನು ತನ್ನ ವೈರಿ ಗಳಿಗೆ ಮುಯ್ಯಿಗೆಮುಯ್ಯಿ ತೀರಿಸಿ ತನ್ನ ಶತ್ರುಗಳ ಮೇಲೆ ಕೋಪವನ್ನು ಇಟ್ಟುಕೊಳ್ಳುತ್ತಾನೆ.
ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.