ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
Cross references
ಆಗ ನೀನು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ; ಇಸ್ರಾಯೇಲು ನನ್ನ ಮಗನು. ಅವನು ನನ್ನ ಚೊಚ್ಚಲ ಮಗನೇ ಎಂದು ಹೇಳಬೇಕು.
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
ನೀವು ನಿಮ್ಮ ದೇವರಾದ ಕರ್ತನ ಮಕ್ಕಳೇ. ನೀವು ಸತ್ತವರಿಗೋಸ್ಕರ ಗಾಯಮಾಡಿ ಕೊಳ್ಳಬೇಡಿರಿ. ನಿಮ್ಮ ಕಣ್ಣುಗಳ ನಡುವೆ ಬೋಳಿಸಿ ಕೊಳ್ಳಬೇಡಿರಿ.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ನಿನ್ನನ್ನು ಹುಟ್ಟಿಸಿದ ಬಂಡೆಯನ್ನು ನೆನಸದೆ ನಿನ್ನನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿದ್ದಿ.
ನಿನ್ನ ಕೈಗಳು ನನ್ನನ್ನು ನಿರ್ಮಿಸಿ ನನ್ನನ್ನು ಸುತ್ತಲೆಲ್ಲಾ ರೂಪಿಸಿದವು. ಆದಾಗ್ಯೂ ನೀನು ನನ್ನನ್ನು ನಾಶಮಾಡುತ್ತೀ.
ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ಬನ್ನಿರಿ, ನಮ್ಮನ್ನು ಉಂಟುಮಾಡಿದ ಕರ್ತನ ಮುಂದೆ ಮೊಣಕಾಲು ಊರೋಣ ಆತನಿಗೆ ಎರಗಿ ಆರಾಧಿಸೋಣ.
ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
ಆತನು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೋಸ್ಕರ ನಾನು ಕರ್ತನಿಗೆ ಏನು ಬದಲು ಮಾಡಲಿ?
ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.
ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ನಿಸ್ಸಂದೇಹವಾಗಿ ನೀನೇ ನಮ್ಮ ತಂದೆಯಾಗಿದ್ದೀ; ಕರ್ತನಾದ ನೀನೇ ನಮ್ಮ ತಂದೆಯು, ನಮ್ಮ ವಿಮೋಚಕನು; ನಿನ್ನ ಹೆಸರು ಸದಾಕಾಲವೂ ಇದೆ.
ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.
ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು ಆತನಿಗೆ--ನಾವು ವ್ಯಭಿಚಾರದಿಂದ ಹುಟ್ಟಿ ದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು.
ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
ಓ ಬುದ್ಧಿಯಿಲ್ಲದ ಗಲಾತ್ಯದವರೇ, ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ಯಾರು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ಸ್ಪಷ್ಟವಾಗಿ ವರ್ಣಿಸಲ್ಪಟ್ಟನಲ್ಲವೇ?
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.