ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
Cross references
ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
ಕರ್ತನು ಈಹೊತ್ತು ನಿನಗೆ ತಾನು ವಾಗ್ದಾನಮಾಡಿದಂತೆ ನೀನು ಆತನಿಗೆ ಅಸಮಾನ್ಯ ಜನವಾಗಬೇಕೆಂದೂ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಬೇಕೆಂದೂಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು.
ಆಗ ಸಮುವೇಲನು ಎಣ್ಣೆಯ ಪಾತ್ರೆಯನ್ನು ತಕ್ಕೊಂಡು ಅವನ ತಲೆಯ ಮೇಲೆ ಹೊಯ್ದು ಮುದ್ದಿಟ್ಟು ಅವನಿಗೆ--ಕರ್ತನು ನಿನ್ನನ್ನು ತನ್ನ ಬಾಧ್ಯತೆಯ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾನಲ್ಲವೋ?
ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು.
ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.
ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.
ಆದದರಿಂದ ಕರ್ತನ ಸಭೆಯಲ್ಲಿ ಪಾಲಿಗಾಗಿ ನೂಲು ಹಾಕುವವನು ನಿನಗೆ ಒಬ್ಬನೂ ಇರುವದಿಲ್ಲ.
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.