ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
Cross references
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು.
ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು.
ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
ದೇವರು ಅದರ ಅರಮನೆಗಳಲ್ಲಿ ಆಶ್ರಯ ವೆಂದು ಗೊತ್ತಾಗಿದೆ.
ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
ಕರ್ತನೇ, ತಲತಲಾಂತರಗಳಲ್ಲಿ ನೀನು ನಮ್ಮ ವಾಸಸ್ಥಾನವಾಗಿದ್ದೀ.
ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ
ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು.
ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
ಕರ್ತನ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುತ್ತಾನೆ.
ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಪಿತೃಗಳ ಅಕ್ರಮ ಗಳಿಗೆ ತಿರುಗಿಕೊಂಡಿದ್ದಾರೆ; ಬೇರೆ ದೇವರುಗಳನ್ನು ಸೇವಿಸುವದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ; ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಯನ್ನು ಇಸ್ರಾಯೇಲಿನ ಮನೆತನದವರೂ ಯೆಹೂದದ ಮನೆ ತನದವರೂ ವಿಾರಿದ್ದಾರೆ.
ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
ನಾನು ಅವರ ತೋಳುಗಳನ್ನು ಹಿಡಿದು ಎಫ್ರಾಯಾಮನಿಗೆ ಕಲಿಸಿದೆನು. ಆದರೆ ನಾನು ಅವ ರನ್ನು ಸ್ವಸ್ಥಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.
ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಸಾವಿರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳ ಗಿಂದ ನನಗಾಗಿ ಹೊರಡುವನು; ಆತನ ಹೊರಡೋಣ ಗಳು ಪೂರ್ವದಿಂದಲೂ ಅನಾದಿ ದಿವಸಗಳಿಂದಲೂ ಅವೆ.
ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.