ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Cross references
ಆದದರಿಂದ ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯ ದ್ರಾಕ್ಷಾರಸವನ್ನೂ ಕೊಡಲಿ.
ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.
ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
ನಿನ್ನ ದೇವರಾದ ಕರ್ತನು ನಿನ್ನನ್ನು ಉತ್ತಮ ದೇಶಕ್ಕೆ ಬರಮಾಡುತ್ತಾನೆ; ಅದು ನೀರಿನ ಹಳ್ಳಗಳೂ ತಗ್ಗಿನಲ್ಲಿಯೂ ಬೆಟ್ಟದಲ್ಲಿಯೂ ಉಕ್ಕುವ ಬುಗ್ಗೆಗಳುಳ್ಳ ದೇಶವೇ.
ಆದರೆ ನೀವು ಸ್ವಾಧೀನಮಾಡಿ ಕೊಳ್ಳುವದಕ್ಕೆ ಹೋಗುವ ದೇಶವು ಬೆಟ್ಟಗಳೂ ತಗ್ಗು ಗಳೂ ಉಳ್ಳ ದೇಶವೇ; ಅದು ಆಕಾಶದ ಮಳೆಯಿಂದ ನೀರು ಕುಡಿಯುತ್ತದೆ;
ಆದರೆ ನೀವು ಯೊರ್ದನನ್ನು ದಾಟಿದ ಮೇಲೆ ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ ಆತನು ಸುತ್ತಲಿ ರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ ನಿಮಗೆ ವಿಶ್ರಾಂತಿ ಕೊಟ್ಟ ಮೇಲೆ
ನನ್ನ ಬೋಧನೆಯು ಮಳೆಯಂತೆ ಸುರಿಯುವದು; ನನ್ನ ಮಾತು ಮಂಜಿನಂತೆಯೂ ಹುಲ್ಲಿನ ಮೇಲೆ ಬೀಳುವ ತುಂತುರಿನ ಹಾಗೆಯೂ ಪಲ್ಯದ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವದು.
ಯೋಸೇಫನ ವಿಷಯವಾಗಿ--ಅವನ ದೇಶವು ಆಕಾಶದ ಅಮೂಲ್ಯವಾದವುಗಳಿಂದಲೂ ಮಂಜಿ ನಿಂದಲೂ ಕೆಳಗೆ ಮಲಗಿರುವ ಅಗಾಧದಿಂದಲೂ
ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
ಸಭೆಗಳಲ್ಲಿ ದೇವರನ್ನು ಸ್ತುತಿ ಸಿರಿ; ಇಸ್ರಾಯೇಲನ ಬುಗ್ಗೆಯಿಂದ ಕರ್ತನನ್ನು ಸ್ತುತಿ ಸಿರಿ.
ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.