ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Cross references
ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ.
ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.
ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು.
ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.
ದೇಶಾಂತ ದವರು ನನಗೆ ಅಧೀನರಾಗುವರು; ಕೇಳಿದ ಕೂಡಲೆ ನನಗೆ ವಿಧೇಯರಾಗುವರು.
ಅವನು ತಿರಿಗಿಕೊಳ್ಳದಿದ್ದರೆ ಆತನು ತನ್ನ ಕತ್ತಿ ಮಸೆಯುವನು: ತನ್ನ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡಿದ್ದಾನೆ.
ನನ್ನ ಮಾತನ್ನು ಕೇಳಿದೊಡನೆ ಅವರು ನನಗೆ ವಿಧೇಯ ರಾಗುವರು.
ಪರಕೀಯರು ನನಗೆ ಅಧೀನರಾ ಗುವರು ಮತ್ತು ಅವರು ಬಾಡಿಹೋಗುವರು; ತಮ್ಮ ದುರ್ಗಗಳೊಳಗಿಂದ ನಡುಗುತ್ತಾ ಬರುವರು.
ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ.
ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
ದೇವರಿಗೆ--ನಿನ್ನ ಕೆಲಸಗಳಿಂದ ನೀನು ಎಷ್ಟು ಭಯಂಕರನಾಗಿದ್ದೀ ಎಂದು ಹೇಳಿರಿ. ನಿನ್ನ ಮಹಾಬಲದ ನಿಮಿತ್ತ ನಿನ್ನ ಶತ್ರುಗಳು ತಾವೇ ನಿನಗೆ ಅಧೀನರಾಗುವರು;
ಕರ್ತನನ್ನು ಹಗೆಮಾಡುವವರು ಆತನಿಗೆ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಿದ್ದರೆ ಅವರ ಕಾಲವು ಎಂದೆಂದಿಗೂ ಇರುತ್ತಿತ್ತು.ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಓ ಇಸ್ರಾಯೇಲೇ, ಕರ್ತನಲ್ಲಿ ಭರವಸವಿಡು; ಆತನೇ ಅವರ ಸಹಾಯವೂ ಗುರಾಣಿಯೂ ಆಗಿ ದ್ದಾನೆ.
ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಆದದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವು; ಆಗ ಅವರು ನಿನಗೆ--ಬುದ್ದಲಿಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ ಎಂದು ನಿನಗೆ ಹೇಳುವರು.
ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಅರಣ್ಯದಲ್ಲಿರುವ ಒಣಗಿಡದ ಹಾಗಿರ್ರಿ.
ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.