ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
Cross references
ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
ಕರ್ತನು ನಿಮ್ಮನ್ನು ಪ್ರೀತಿಸಿದ್ದರಿಂದಲೂ ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ಕಾಪಾಡುವದರಿಂದಲೂ ಕರ್ತನು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿನ್ನನ್ನು ದಾಸತ್ವದ ಮನೆಯಿಂದಲೂ ಐಗುಪ್ತದ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದನು.
ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ. ನಿನ್ನನ್ನು ಕರ್ತನು ತನಗೆ ಅಸಮಾನ್ಯಜನವಾಗುವ ಹಾಗೆ ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ನಿನ್ನನ್ನು ಆದುಕೊಂಡಿದ್ದಾನೆ.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
ಆತನು ಪ್ರೀತಿಮಾಡುವ ಯಾಕೋಬನ ಘನತೆಯಾದ ನಮ್ಮ ಬಾಧ್ಯತೆಯನ್ನು ಆದುಕೊಳ್ಳುತ್ತಾನೆ--ಸೆಲಾ.
ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ನನ್ನ ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ ನನ್ನ ಆಜ್ಞೆಗಳನ್ನು ನಿನ್ನಲ್ಲಿ ಬಚ್ಚಿಟ್ಟುಕೊಂಡರೆ
ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
ಯೆಹೂದದ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ಕರ್ತನು ಹೇಳುವ ದೇನಂದರೆ--ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಯಲ್ಲಿ ಕೊಡುತ್ತೇನೆ;
ಇಸ್ರಾಯೇಲನು ಮಗುವಾಗಿದ್ದಾಗ ನಾನು ಅವನನ್ನು ಪ್ರೀತಿಮಾಡಿದೆನು, ಮತ್ತು ನನ್ನ ಮಗನನ್ನು ಐಗುಪ್ತದೊಳಗಿಂದ ಕರೆದೆನು.
ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು.
ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
ಆಗ ಜನರು ನಡೆದ ಸಂಗತಿ ಏನೆಂದು ನೋಡುವದಕ್ಕಾಗಿ ಹೊರಟು ಹೋಗಿ ಯೇಸುವಿನ ಬಳಿಗೆ ಬಂದು ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿ ಯುಳ್ಳವನಾಗಿ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಭಯಪಟ್ಟರು.
ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು. ಆಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕೂತು ಆತನ ವಾಕ್ಯವನ್ನು ಕೇಳುತ್ತಿದ್ದಳು.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ
ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನನ್ನೂ ಅನುಸರಿಸುವವರಾದಿರಿ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.