ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
Cross references
ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ನಿನಗೂ ನಿನ್ನ ತರುವಾಯ ನಿನ್ನ ಸಂತಾನಕ್ಕೂ ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ಶಾಶ್ವತವಾದ ಸ್ವಾಸ್ಥ್ಯವಾಗಿ ಕೊಡುತ್ತೇನೆ. ನಾನು ಅವರ ದೇವರಾಗಿರುವೆನು ಅಂದನು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು.
ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ಇಗೋ, ಆ ದೇಶವನ್ನು ನಿಮ್ಮ ಮುಂದೆ ಇಟ್ಟಿದ್ದೇನೆ; ಹೋಗಿ ಕರ್ತನು ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ ಎಂದು ಹೇಳಿದನು.
ನನ್ನ ಮೇಲೆಯೂ ಕರ್ತನು ನಿಮ್ಮ ದೆಸೆಯಿಂದ ಕೋಪಗೊಂಡು--ನೀನು ಸಹ ಅದರಲ್ಲಿ ಪ್ರವೇಶಿಸು ವದಿಲ್ಲ.
ಆದರೆ ಕರ್ತನು ನಿಮಗೋಸ್ಕರ ನನ್ನ ಮೇಲೆ ಕೋಪಗೊಂಡು ನನ್ನ ಮನವಿಯನ್ನು ಕೇಳಲಿಲ್ಲ; ಕರ್ತನು ನನಗೆ--ಇನ್ನು ಸಾಕು; ಈ ವಿಷಯ ದಲ್ಲಿ ನನ್ನ ಸಂಗಡ ಇನ್ನೂ ಮಾತನಾಡಬೇಡ.
ನೀನು ಆ ದೇಶವನ್ನು ಕಣ್ಣಾರೆ ನೋಡುವಿ; ಆದರೆ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವದಿಲ್ಲ ಎಂದು ಹೇಳಿದನು.
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು.
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ.
ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.