ಇದಲ್ಲದೆ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದ್ದನು. ಯಾಕಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಇಸ್ರಾಯೇಲ್ ಮಕ್ಕಳು ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿ ಅವನ ಮಾತು ಕೇಳಿದರು.
Cross references
ಇಸ್ರಾಯೇಲ್ ಮಕ್ಕಳು ಹೊರಟುಹೋಗಿ ಕರ್ತನು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಅವರು ಮಾಡಿದರು.
ಇದಲ್ಲದೆ ನಾನು ಜ್ಞಾನದ ಆತ್ಮವನ್ನು ತುಂಬಿಸಿದ ವಿವೇಕ ಹೃದಯ ವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ನನಗೆ ಯಾಜಕ ಸೇವೆಮಾಡುವಂತೆ ನೀನು ಅವನನ್ನು ಪ್ರತಿಷ್ಠಿಸ ಬೇಕು.
ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕ ದಿಂದಲೂ ಎಲ್ಲಾ ತರವಾದ ಕೆಲಸದ ಕಲೆಯಿಂದಲೂ ತುಂಬಿಸಿದ್ದೇನೆ.
ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು
ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.
ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.
ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ.
ಅವರು ದಾಟಿಹೋದ ತರುವಾಯ ಆದದ್ದೇ ನಂದರೆ, ಎಲೀಯನು ಎಲೀಷನಿಗೆ--ನಾನು ನಿನ್ನ ಬಳಿ ಯಿಂದ ತಕ್ಕೊಳ್ಳಲ್ಪಡುವದಕ್ಕಿಂತ ಮುಂಚೆ ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು ಅಂದನು. ಅದಕ್ಕೆ ಎಲೀಷನು ದಯಮಾಡಿ ನಿನಗಿರುವ ಆತ್ಮದಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸು ಅಂದನು.
ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಮಕ್ಕಳು ಅವನನ್ನು ಕಂಡಾಗ--ಎಲೀಯನ ಆತ್ಮನು ಎಲೀಷನ ಮೇಲೆ ನಿಂತಿರುವನು ಎಂದು ಹೇಳಿ ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿದರು.
ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು.
ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ.
ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.
ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
ನಿನ್ನಲ್ಲಿರುವ ವರವನ್ನು ಅಲಕ್ಷ್ಯಮಾಡಬೇಡ; ಸಭೆಯ ಹಿರಿಯರು ಪ್ರವಾದನೆಯಿಂದ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ಅದು ನಿನಗೆ ಕೊಡಲ್ಪಟ್ಟಿತಲ್ಲಾ.
ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ