ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
Cross references
ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು.
ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
ಆಗ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ, ನಿಮ್ಮನ್ನು ಪರೀಕ್ಷಿಸುವದಕ್ಕೂ ನೀವು ಪಾಪ ಮಾಡದಂತೆ ಆತನ ಭಯವು ನಿಮಗಿರುವದಕ್ಕೂ ದೇವರು ಬಂದಿದ್ದಾನೆ ಅಂದನು.
ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.
ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.
ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.
ನೀನು ನಿನ್ನ ದೇವರಾದ ಕರ್ತ ನಿಗೆ ಎಂದೆಂದಿಗೂ ಭಯಪಡುವದನ್ನು ಕಲಿಯುವ ಹಾಗೆ ನಿನ್ನ ಧಾನ್ಯ ದ್ರಾಕ್ಷರಸ ಎಣ್ಣೆಗಳ ದಶಮಾಂಶ ವನ್ನೂ ನಿನ್ನ ಪಶು ಕುರಿಗಳಲ್ಲಿ ಚೊಚ್ಚಲುಗಳನ್ನೂ ನಿನ್ನ ದೇವರಾದ ಕರ್ತನ ಮುಂದೆ ಆತನು ತನ್ನ ಹೆಸರನ್ನು ಇರಿಸುವದಕ್ಕೆ ಆದುಕೊಂಡ ಸ್ಥಳದಲ್ಲಿ ತಿನ್ನಬೇಕು.
ಅದು ಅವನ ಸಂಗಡ ಇರಬೇಕು; ಅವನು ತನ್ನ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ಎಲ್ಲಾ ಮಾತು ಗಳನ್ನೂ ಈ ನಿಯಮಗಳನ್ನೂ ಕಾಪಾಡಿ ಅನುಸರಿಸು ವದಕ್ಕೆ ಕಲಿಯುವ ಹಾಗೆಯೂಅವನ ಹೃದಯವು ಅವನ ಸಹೋದರರ ಮೇಲೆ ಹೆಚ್ಚಿಸಿಕೊಳ್ಳದ ಹಾಗೆಯೂ ಅವನು ಆಜ್ಞೆಯನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ತೊಲಗದ ಹಾಗೆಯೂ ಅವನಿಗೂ ಅವನ ಮಕ್ಕಳಿಗೂ ಇಸ್ರಾಯೇಲಿನ ಮಧ್ಯದಲ್ಲಿ ಅವನ ರಾಜ್ಯದಲ್ಲಿ ದಿನಗಳು ಹೆಚ್ಚುವ ಹಾಗೆಯೂ ಅದನ್ನು ತನ್ನ ಜೀವಿತದ ದಿನಗಳಲ್ಲೆಲ್ಲಾ ಓದಬೇಕು.
ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
ಆದರೆ ನೀವು ಕರ್ತನಿಗೆ ಭಯ ಪಟ್ಟು ನಿಮ್ಮ ಪೂರ್ಣ ಹೃದಯದಿಂದ ಸತ್ಯದಲ್ಲಿ ಆತ ನನ್ನು ಸೇವಿಸಿರಿ. ಆತನು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದನೆಂದು ಆಲೋ ಚಿಸಿರಿ.ಆದರೆ ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ ನೀವೂ ನಿಮ್ಮ ಅರಸನೂ ನಾಶವಾಗುವಿರಿ ಅಂದನು.
ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.
ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.
ಆತನಿಗೆ ಭಯಪಡು ವವರ ಮೇಲೆ ಆತನ ಕರುಣೆಯು ತಲತಲಾಂತರ ಗಳಿಗೂ ಇರುವದು.
ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.