ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
Cross references
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ನೀವು ವಿಗ್ರಹ ಗಳ ಕಡೆಗೆ ತಿರುಗಿಕೊಳ್ಳಬೇಡಿರಿ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ; ನಿಮ್ಮ ದೇವರಾಗಿರುವ ಕರ್ತನು ನಾನೇ.
ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು?
ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು.
ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು.
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;
ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.