ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
Cross references
ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.ನಾನು ಜೀವವನ್ನೂ ಮರಣವನ್ನೂ, ಆಶೀರ್ವಾದವನ್ನೂ ಶಾಪ ವನ್ನೂ ನಿನ್ನ ಮುಂದೆ ಇಟ್ಟಿದ್ದೇನೆಂಬದಕ್ಕೆ ಆಕಾಶವನ್ನೂ ಭೂಮಿಯನ್ನೂ ಈಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ.
ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಈ ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
ಆದರೆ ನೂನನ ಮಗನೆಂಬ ಕರ್ತನ ಸೇವಕನಾದ ಯೆಹೋಶುವನು ನೂರ ಹತ್ತು ವರುಷ ಪ್ರಾಯದವನಾಗಿ ಸತ್ತನು.
ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
ತಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಮಾಡಿದ ತಮ್ಮ ದೇವರಾದ ಕರ್ತನನ್ನು ಬಿಟ್ಟು ತಮ್ಮ ಸುತ್ತಲಿರುವ ಜನಗಳ ಅನ್ಯ ದೇವರುಗಳ ಹಿಂದೆಹೋಗಿ ಅವುಗಳಿಗೆ ಅಡ್ಡಬಿದ್ದು ಕರ್ತನಿಗೆ ಕೋಪವನ್ನೆಬ್ಬಿಸಿದರು.
ತಮ್ಮ ಕುಮಾರರನ್ನೂ ಕುಮಾರ್ತೆಯರನ್ನೂ ಬೆಂಕಿಯಲ್ಲಿ ದಾಟಮಾಡಿ ಕಣಿಗಳನ್ನೂ ಶಕುನಗಳನ್ನೂ ಬಳಸಿ ಕರ್ತ ನಿಗೆ ಕೋಪ ಬರುವಂತೆ ಆತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು.
ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು.
ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು.
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
ಗಿಬ್ಯದ ದಿನಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ; ಆದದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕಮಾಡಿಕೊಳ್ಳುವನು, ಅವರ ಪಾಪಗಳನ್ನು ವಿಚಾರಿಸುವನು.
ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?