ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.
Cross references
ನೀನು ಹೋರೇಬಿನಲ್ಲಿ ಸಭೆಯ ದಿವಸ ದಲ್ಲಿ ನಿನ್ನ ದೇವರಾದ ಕರ್ತನಿಂದ ಬೇಡಿಕೊಂಡ ಎಲ್ಲಾದರ ಪ್ರಕಾರ ಆಗುವದು; ನಾನು ಸಾಯದ ಹಾಗೆ ಇನ್ನು ಮೇಲೆ ನನ್ನ ದೇವರಾದ ಕರ್ತನ ಶಬ್ದವನ್ನು ನಾನು ಕೇಳುವದಿಲ್ಲ; ಈ ಘೋರವಾದ ಬೆಂಕಿಯನ್ನೂ ನೋಡುವದಿಲ್ಲವೆಂದು ಹೇಳಿದೆಯಲ್ಲಾ.
ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.
ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು.
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು.
ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು.
ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.