ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
Cross references
ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು
ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು.
ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
ಹೀಗಿರುವದರಿಂದ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಂಡು ಆತನ ಮಾರ್ಗಗಳಲ್ಲಿ ನಡೆದುಕೊಂಡು ಆತನಿಗೆ ಭಯಪಡಬೇಕು.
ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಹೀಗಿರುವದರಿಂದ ನಿನ್ನ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಅಪ್ಪಣೆ ನಿಯಮ ನ್ಯಾಯ ಆಜ್ಞೆಗಳನ್ನು ಯಾವಾಗಲೂ ಕೈಕೊಳ್ಳಬೇಕು.
ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡುವದರಿಂದ ನಿನಗೂ ನಿನ್ನ ಮುಂದಿರುವ ಮಕ್ಕಳಿಗೂ ಒಳ್ಳೇದಾಗುವ ಹಾಗೆ ಅದನ್ನು ತಿನ್ನಬೇಡ.
ನೀನು ನಿನ್ನ ದೇವರಾದ ಕರ್ತನ ಮುಂದೆ ಒಳ್ಳೇದನ್ನೂ ಸರಿಯಾದದ್ದನ್ನೂ ಮಾಡುವದರಿಂದ ನಿನಗೂ ನಿನ್ನ ಮುಂದೆ ಇರುವ ನಿನ್ನ ಮಕ್ಕಳಿಗೂ ಎಂದೆಂದಿಗೂ ಒಳ್ಳೇದಾಗುವ ಹಾಗೆ ನಾನು ನಿನಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡು.
ನಿನ್ನ ಕಣ್ಣು ಅವನನ್ನು ಕರುಣಿಸಬಾರದು; ನಿನಗೆ ಒಳ್ಳೆದಾಗುವ ಹಾಗೆ ಅಪರಾಧವಿಲ್ಲದ ರಕ್ತದ ದೋಷವನ್ನು ಇಸ್ರಾ ಯೇಲಿನಿಂದ ತೆಗೆದುಹಾಕಬೇಕು.
ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದಿನಗಳು ಹೆಚ್ಚುವ ಹಾಗೆಯೂ ಹೇಗಾದರೂ ತಾಯಿ ಯನ್ನು ಕಳುಹಿಸಿಬಿಟ್ಟು ಮರಿಗಳನ್ನು ತಕ್ಕೊಳ್ಳಬೇಕು.
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಅವಳ ಅತ್ತೆಯಾದ ನೊವೊಮಿಯು ಅವಳಿಗೆ ನನ್ನ ಮಗಳೇ, ನಿನಗೆ ಒಳ್ಳೇದಾಗುವದಕ್ಕೋಸ್ಕರ ನಾನು ನಿನಗೆ ವಿಶ್ರಾಂತಿ ಯನ್ನು ಹುಡುಕಬೇಕಲ್ಲವೋ?
ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು.
ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ಹಾ, ನನ್ನ ಜನರು ನನ್ನ ಮಾತನ್ನು ಕೇಳಿ, ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ,
ಇದಲ್ಲದೆ ಆತನು ಉತ್ತಮವಾದ ಗೋಧಿ ಯಿಂದ ಅವರಿಗೆ ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವನು.
ನ್ಯಾಯವನ್ನು ಕೈಕೊಂಡು ಎಲ್ಲಾ ಕಾಲದಲ್ಲಿ ನೀತಿಯನ್ನು ಮಾಡುವವರು ಧನ್ಯರು.
ಮಾರ್ಗದಲ್ಲಿ ಅಶುದ್ಧರಾಗದವರೂ ಕರ್ತನ ನ್ಯಾಯಪ್ರಮಾಣದಲ್ಲಿ ನಡೆದುಕೊಳ್ಳುವವರೂ ಧನ್ಯರು.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
ನೀನು ಅವನಿಗೆ ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ಇಗೋ, ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ; ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂಮಿಯ ಮೇಲೆ ಬಹು ಕಾಲ ಬದುಕುವಿ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.