ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
Cross references
ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು;
ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
ಇದಲ್ಲದೆ ಮೋಶೆ ಇಸ್ರಾಯೇಲಿನ ಹಿರಿಯರ ಸಂಗಡ ಜನರಿಗೆ--ನಾನು ನಿಮಗೆ ಈ ಹೊತ್ತು ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಕಾಪಾ ಡಬೇಕು.
ಆತನ ಸಾಕ್ಷಿಗಳನ್ನು ಕೈಕೊಂಡು ಪೂರ್ಣಹೃದಯದಿಂದ ಆತನನ್ನು ಹುಡುಕುವವರು ಧನ್ಯರು.
ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.