ನಾವು ಐಗುಪ್ತದಲ್ಲಿ ಫರೋಹನಿಗೆ ದಾಸ ರಾಗಿದ್ದೆವು; ಕರ್ತನು ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದನು.
Cross references
ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ಆಗ ಮೋಶೆಯು ಜನರಿಗೆ--ನೀವು ಐಗುಪ್ತದ ದಾಸತ್ವದ ಮನೆಯಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಿಮ್ಮನ್ನು ಅಲ್ಲಿಂದ ಹೊರಗೆ ಬರಮಾಡಿದ್ದಾನೆ. ಹೀಗಿರುವದರಿಂದ ಅಂದು ನೀವು ಹುಳಿ ರೊಟ್ಟಿಯನ್ನು ತಿನ್ನಬಾರದು.
ಕರ್ತನ ನ್ಯಾಯಪ್ರಮಾಣವು ನಿನ್ನ ಬಾಯಲ್ಲಿ ಇರುವಂತೆ ಅದು (ಆಚರಣೆಯು) ನಿನ್ನ ಕೈ ಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ಮಧ್ಯೆ ಜ್ಞಾಪಕಾರ್ಥವಾಗಿಯೂ ಇರ ಬೇಕು. ಕರ್ತನು ನಿನ್ನನ್ನು ತನ್ನ ಬಲವಾದ ಕೈಯಿಂದ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.
ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.
ನಿನ್ನನ್ನು ಐಗುಪ್ತದೇಶದಿಂದಲೂ ದಾಸತ್ವದ ಮನೆಯೊಳ ಗಿಂದಲೂ ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ.
ನಿನ್ನನ್ನು ಐಗುಪ್ತದೇಶದೊಳಗಿಂದ ಅಂದರೆ ದಾಸ ತ್ವದ ಮನೆಯೊಳಗಿಂದ ಹೊರಗೆ ಬರಮಾಡಿದ ನಿನ್ನ ದೇವರಾದ ಕರ್ತನು ನಾನೇ.
ನೀನು ಐಗುಪ್ತ ದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ಅಲ್ಲಿಂದ ಬಲವಾದ ಕೈಯಿಂದಲೂ ಚಾಚಿದ ತೋಳಿನಿಂದಲೂ ಹೊರಗೆ ಬರಮಾಡಿದ ನೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಕರ್ತನು ನಿನಗೆ ಸಬ್ಬತ್ ದಿವಸವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾನೆ.
ನೀನು ಐಗುಪ್ತದೇಶದಲ್ಲಿ ದಾಸನಾಗಿದ್ದಿ ಎಂದೂ ನಿನ್ನ ದೇವರಾದ ಕರ್ತನು ನಿನ್ನನ್ನು ವಿಮೋಚಿಸಿ ದನೆಂದೂ ಜ್ಞಾಪಕಮಾಡಿಕೊಳ್ಳಬೇಕು; ಆದದರಿಂದ ನಾನು ಈಹೊತ್ತು ಇದನ್ನು ನಿನಗೆ ಆಜ್ಞಾಪಿಸುತ್ತೇನೆ.
ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು
ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ನೀತಿಯನ್ನು ಹಿಂಬಾಲಿಸುವವರೇ, ಕರ್ತನನ್ನು ಹುಡುಕುವವರೇ, ನನ್ನ ಕಡೆಗೆ ಕಿವಿ ಗೊಡಿರಿ; ನೀವು ಯಾವ ಬಂಡೆಯೊಳಗಿಂದ ಕಡಿಯ ಲ್ಪಟ್ಟಿರೋ ಮತ್ತು ಯಾವ ಗುಂಡಿಯೊಳಗಿಂದ ಅಗೆಯ ಲ್ಪಟ್ಟಿರೋ ಆ ಕಡೆಗೆ ನೋಡಿರಿ.
ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
ಆದರೆ ನೀವು ಪಾಪಕ್ಕೆ ದಾಸ ರಾಗಿದ್ದರೂ ನಿಮಗೆ ಒಪ್ಪಿಸಲ್ಪಟ್ಟ ಬೋಧನೆಗೆ ನೀವು ಹೃದಯಪೂರ್ವಕವಾಗಿ ಅಧೀನರಾದದರಿಂದ ದೇವ ರಿಗೆ ಸ್ತೋತ್ರವಾಗಲಿ.
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.